ಬೆಂಗಳೂರು: ಶಾಸಕ ಬಿಆರ್ ಪಾಟೀಲ್ ವಸತಿ ಯೋಜನೆಯ ಅವ್ಯವಹಾರದ ಬಗ್ಗೆ ಮಾತನಾಡಿ ಎಲ್ಲರ ಕಣ್ಣಿಗೆ ಗುರಿಯಾಗಿದ್ದರು. ಸಿಎಂ ಸಿದ್ದರಾಮಯ್ಯ ಅವರ ವಿಚಾರದಲ್ಲಿ ನಿನ್ನೆ ಹೇಳಿದ ಮಾತು ಬೇರೆ ಇಂದು ಉಲ್ಟಾ ಹೊಡೆದಿದ್ದಾರೆ. ಲಾಟರಿ ಸಿಎಂ ಅವರು. ನಾನೇ ಸೋನಿಯಾ ಗಾಂಧಿ ಬಳಿ ಕರೆದುಕೊಂಡು ಹೋಗಿದ್ದು. ಅವನ ಗ್ರಹಚಾರ ಚೆನ್ನಾಗಿತ್ತು ಅವ್ನು ಆಗ್ಬಿಟ್ಟ. ಅದೃಷ್ಟ ಇತ್ತು ಮುಖ್ಯಮಂತ್ರಿ ಆದ್ರೂ ಎಂಬ ಮಾತನ್ನ ಹೇಳಿದ್ದರು. ಆದರೆ ಇಂದು ಅದಕ್ಕೆ ತದ್ವಿರುದ್ಧವಾಗಿ ಮಾತನಾಡಿದ್ದಾರೆ. ಹಾಗಾದ್ರೆ ಬಿ ಆರ್ ಪಾಟೀಲ್ ಹೇಳಿದ್ದೇನು ಎಂಬ ವಿಚಾರ ಇಲ್ಲಿದೆ.
ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಇಂದು ಸ್ಪಷ್ಟನೆ ನೀಡಿದ್ದಾರೆ. ನನ್ನ ಹೇಳಿಕೆಯನ್ನು ತಿರುಚಲಾಗಿದೆ. ತೇಜೋವಧೆ ಮಾಡಲಾಗಿದೆ. ನಾನಿವತ್ತು ಕೆ ಆರ್ ಪೇಟೆಯಲ್ಲಿ ಯಾರೋ ನನ್ನ ಆತ್ಮೀಯ ಸ್ನೇಹಿತ ಮಾತನಾಡುವಾಗ ಸಿದ್ದರಾಮಯ್ಯ ಅವರ ವಿಚಾರ ಪ್ರಸ್ತಾಪ ಆದಾಗ, ನಾನು ಕೆಲವೊಂದು ಮಾತನಾಡಿದ್ದೇನೆ. ಲಕ್ಕಿ ಲಾಟರಿ ಇತ್ತು ಅವರು ಸಿಎಂ ಆದ್ರೂ ಅಂದೆ. ನಾನು ಸೋನಿಯಾ ಗಾಂಧಿ ಅವರನ್ನ ಭೇಟಿ ಮಾಡ್ಸಿದ್ದೀನಿ ಅಂತ ಹೇಳಿದ್ದು ಸಂಪೂರ್ಣ ತಪ್ಪು. ಸೋನಿಯಾ ಗಾಂಧಿ ಭೇಟಿ ಮಾಡಿಸುವಾಗ ಜೊತೆಗೆ ಹೋಗಿದ್ದೆ. ಅವರೊಬ್ಬ ಮಾಸ್ ಲೀಡರ್. ಅವರನ್ನ ಮುಖ್ಯಮಂತ್ರಿ ಮಾಡುವ ಶಕ್ತಿ ನನಗಿಲ್ಲ. ಅವರು ಮತ್ತು ನನ್ನ ಆತ್ಮೀಯ ಸಂಬಂಧವನ್ನ ಹಾಳು ಮಾಡುವುದಕ್ಕೆ ಕೆಲವರು ಉದ್ದೇಶಪೂರ್ವಕವಾಗಿ ಕೆಲಸ ಮಾಡುತ್ತಿದ್ದಾರೆ. ಒಂಭತ್ತು ಜನ ನಾಯಕರು ಅವರ ನೇತೃತ್ವದಲ್ಲಿಯೇ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದೆವು. ಅವರ ಜನ ಬೆಂಬಲವನ್ನು ನೋಡಿ ಮುಖ್ಯಮಂತ್ರಿ ಮಾಡಿದೆ ನಾವಲ್ಲ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















