Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಾಷ್ಟ್ರಮಟ್ಟದಲ್ಲಿ ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ಗುರಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎ.ವಿ

---Advertisement---

 

ಸುದ್ದಿಒನ್, ದಾವಣಗೆರೆ; ಡಿ.23: ದಾವಣಗೆರೆ ಬೆಣ್ಣೆ ದೋಸೆಯನ್ನು ರಾಷ್ಟ್ರಮಟ್ಟದಲ್ಲಿ ಜನಪ್ರಿಯಗೊಳಿಸಲು ಹಾಗೂ ದೋಸೆಯ ಸಾಂಪ್ರದಾಯಿಕತೆ ಉಳಿಸುವ ಮೂಲಕ ಗುಣಮಟ್ಟ ಕಾಪಾಡಿಕೊಂಡು ಬ್ರಾಂಡಿAಗ್  ಕಲ್ಪಿಸುವುದು ಈ ದೋಸೋತ್ಸವದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.
ಶನಿವಾರ ಜಿಲ್ಲಾಡಳಿತದ ವತಿಯಿಂದ  ನಗರದ ಎಂ.ಬಿ.ಎ  ಮೈದಾನ ಮತ್ತು ಗ್ಲಾಸ್ ಹೌಸ್ ಮುಂಭಾಗದಲ್ಲಿ ಆಯೋಜಿಸಲಾದ  ದೋಸೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.   ದಾವಣಗೆರೆ ಬೆಣ್ಣೆ ದೋಸೆ ಇತಿಹಾಸ ಪ್ರಸಿದ್ಧವಾಗಿದ್ದು, ರಾಷ್ಟ್ರೀಯ ಮಟ್ಟದಲ್ಲಿ ದೋಸೆಯನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಇಂದಿನಿAದ ಡಿಸೆಂಬರ್ 25 ರವರೆಗೆ ದೋಸೋತ್ಸವ  ಏರ್ಪಡಿಸಲಾಗಿದೆ. ಕಳೆದ ನಾಲ್ಕು ದಶಕಗಳಿಂದ ಬೆಣ್ಣೆ ದೋಸೆ  ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರ ಮುಖಾಂತರ ಸಾರ್ವಜನಿಕರಿಗೆ ಗುಣಮಟ್ಟದ ಬೆಣ್ಣೆ ದೋಸೆಯನ್ನು ತಲುಪಿಸುವಲ್ಲಿ ಜಿಲ್ಲಾಡಳಿತ ಸಫಲವಾಗಿದೆ ಎಂದರು.

ನಗರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಕಾರ್ಯಕ್ರಮ ನಡೆಯುತ್ತಿದ್ದು ಬಂದಂತಹ ಜನರಿಗೆ ಬೆಣ್ಣೆ ದೋಸೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಈ ಸಂಧರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ.   ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದಾವಣಗೆರೆಯ ಗರಿಗರಿ ಬೆಣ್ಣೆ ದೋಸೆಯನ್ನು ಸವಿದು ಆನಂದಿಸಬಹುದಾಗಿದೆ  ಎಂದರು.

ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಎಂ. ಸಂತೋಷ್, ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಡಾ. ಅಶ್ವತ್ ಎಂ.ಬಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಷಣ್ಮುಖಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಶಿದ್ರಾಮ್ ಮಾರಿಹಾಳ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಘವೇಂದ್ರ ಪ್ರಸಾದ್ ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...