ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ನವದೆಹಲಿ: ಶಾಲಾ ಮಕ್ಕಳಿಗೆ ಸುಪ್ರೀಂ ಕೋರ್ಟ್ ಗೊಂದಲಕ್ಕೀಡು ಮಾಡಿದೆ. ಈಗಾಗಲೇ 5, 8, 9, 11 ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಅನುಮತಿ ನೀಡಿತ್ತು. ಆದರೆ ಈಗ ಸುಪ್ರೀಂ ಕೋರ್ಟ್ ಹೈಕೋರ್ಟ್ ನೀಡಿದ ಆದೇಶಕ್ಕೆ ತಡೆ ನೀಡಿದೆ. ಇದು ಮಕ್ಕಳಿಗೆ ಮತ್ತಷ್ಟು ಟೆನ್ಶನ್ ಹೆಚ್ಚು ಮಾಡಿದೆ.
ಈಗಾಗಲೇ 5, 8, 9, 11 ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಚೆ ಮುಗಿದಿದೆ. ಫಲಿತಾಂಶ ಹೊರ ಬೀಳಬೇಕಿತ್ತು. ಆದರೆ ಇದೇ ಸಮಯದಲ್ಲಿ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮುಂದಿನ ಆದೇಶದ ತನಕ ಯಾವುದೇ ಶಾಲೆಗಳು ಫಲಿತಾಂಶವನ್ನು ಪ್ರಕಟಿಸಬಾರದು ಎಂದು ಆದೇಶ ನೀಡಿದೆ. ಜಸ್ಟೀಸ್ ತ್ರಿವೇದಿ ಮತ್ತು ಪಂಕಜ್ ಮಿತ್ತಲ್ ನೇತೃತ್ವದ ಪೀಠದಿಂದ ಈ ಆದೇಶ ನೀಡಲಾಗಿದೆ.
ಖಾಸಗಿ ಶಾಲಾ ಒಕ್ಕೂಟಗಳು 5, 8, 9, 11 ತರಗತಿಗಳಿಗೆ ಬೋರ್ಡ್ ಪರೀಕ್ಷೆ ಬೇಡ ಎಂದು ಮನವಿ ಮಾಡಿತ್ತು. ಈ ಸಂಬಂ್ದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಖಾಸಗಿ ಶಾಲೆಗಳ ಒಕ್ಕೂಟಕ್ಕೆ ಹೈಕೋರ್ಟ್ ನಲ್ಲೆರ ಬಗೆಹರಿಸಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಆದರೀಗ ಸುಪ್ರೀಂ ಕೋರ್ಟ್ ಹೈಕೋರ್ಟ್ಆದೇಶಕ್ಕೆ ತಡೆ ನೀಡಿದ್ದು, ಫಲಿತಾಂಶಕ್ಕೂ ತಡೆ ನೀಡಿದೆ.
ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ಆದೇಶದಿಂದ ಮಕ್ಕಳು ಟೆನ್ಶನ್ ಆಗಿದ್ದಾರೆ. ಫಲಿತಾಂಶ ತಡೆ ಹಿಡಿದಿರುವುದು ಪೋಷಕರಿಗೂ ಆತಂಕವಾಗಿದೆ. ಮುಂದಿನ ಆದೇಶದವರೆಗೂ ತಡೆಹಿಡಿಯಲಾಗಿದೆ. ಮುಂದಿನ ಆದೇಶದಲ್ಲಿ ಯಾವ ರೀತಿಯ ತೀರ್ಪು ಬರಬಹುದು ಎಂಬುದನ್ನು ಕಾದು ನೋಡಬೇಕಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್