Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಕ್ಕಿ ಕೊರತೆಯಿಂದ ನೀಡುತ್ತಿದ್ದ ಹಣಕ್ಕೆ ಅಕ್ಟೋಬರ್/ನವೆಂಬರ್ ನಲ್ಲಿ ಬ್ರೇಕ್..!

---Advertisement---

ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ‌ ಬರುವುದಕ್ಕೂ ಮುನ್ನ ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ಮೇಲೆ ಅಕ್ಕಿ ಕೊರತೆಯಿಂದಾಗಿ, ಐದು ಕೆಜಿ ಅಕ್ಕಿ, ಇನ್ನುಳಿ ಐದು ಕೆಜಿಗೆ ಹಣ ನೀಡುತ್ತಿದೆ. ಇದೀಗ ಅಕ್ಟೋಬರ್ ಅಥವಾ ನವೆಂಬರ್ ತಿಂಗಳ ಬಳಿಕ ಆ ಹಣಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ‌.

ಈಗಾಗಲೇ ತೆಲಂಗಾಣದ ಜೊತೆಗೆ ಮಾತುಕತೆ‌ ನಡೆದಿದೆ. ಅಲ್ಲಿಂದ ಅಕ್ಕಿ‌ ಖರೀದಿ ಮಾಡಲು ನಿರ್ಧಾರ ಮಾಡಿ ಆಗಿದೆ. ಈಗಾಗಲೇ ಅಲ್ಲಿನ ಸರ್ಕಾರದ ಜೊತೆಗೆ ಆಹಾರ ಸಚಿವ ಕೆ ಎಚ್ ಮುನಿಯಪ್ಪ ಮಾತನಾಡಿದ್ದಾರೆ. ಹೀಗಾಗಿ ಕೊಟ್ಟ ಮಾತಿನಂತೆ ರಾಜ್ಯ ಸರ್ಕಾರ ಹತ್ತು ಕೆಜಿ ಅಕ್ಕಿ ಕೊಡುವುದಕ್ಕೆ ನಿರ್ಧಾರ ಮಾಡಿದೆ.

ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಮುನಿಯಪ್ಪ, ಅಕ್ಟೋಬರ್ ತಿಂಗಳಿನಲ್ಲಿಯೇ ಅನ್ನಭಾಗ್ಯ ಯೋಜನೆಗೆ ಪೂರ್ಣಪ್ರಮಾಣದಲ್ಲಿ ಅಕ್ಕಿ ನೀಡಲು ಕ್ರಮವಹಿಸಲಾಗುತ್ತಿದೆ. ಅಂತಿಮ ಹಂತದ ಮಾತುಕತೆ ನಡೆಯುತ್ತಿದೆ. ಶೀಘ್ರವೇ ಅಕ್ಕಿ ಪೂರೈಕೆ ಮಾಡಲಾಗುತ್ತದೆ. ಬರ ಸನ್ನಿವೇಶವಿದ್ದರೂ, ಮುಂದೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ‌.

ಇಷ್ಟು ದಿನ ಅಕ್ಕಿಯ ಬದಲಿಗೆ ಒಬ್ಬೊಬ್ಬರ ಖಾತೆಗೆ 170 ರೂಪಾಯಿ ಅಂತೆ ಹಣ ನೀಡಲಾಗುತ್ತಿತ್ತು. ಹಣದ ಬದಲು ಅಕ್ಕಿಯನ್ನೇ ನೀಡಬೇಕು ಎಂದು ಬಿಜೆಪಿ ಕೂಡ ಆಗ್ರಹಿಸಿತ್ತು. ಇದೀಗ ಸಿದ್ದರಾಮಯ್ಯ ಸರ್ಕಾರ ಎಲ್ಲಾ ಯೋಜನೆಯನ್ನು ಯಶಸ್ವಿ ಮಾಡಿದ್ದು, ಈಗ ಅಕ್ಕಿಭಾಗ್ಯ ಯೋಜನೆಯನ್ನು, ಎಲ್ಲಿಯೂ ವಿಫಲವಾಗದಂತೆ ನೋಡಿಕೊಳ್ಳಲು, ಕೊಟ್ಟ ಮಾತಿನಂತೆ ಅಕ್ಕಿಯನ್ನೇ ನೀಡಲು ತಯಾರಿ ನಡೆಸಿದೆ. ಅಕ್ಟೋಬರ್ ಅಥವಾ ನವೆಂಬರ್ ನಲ್ಲಿ ಒಬ್ಬರಿಗೆ ಹತ್ತು ಕೆಜಿಯಂತೆ ಅಕ್ಕಿ ನೀಡಲಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment