ಬೆಂಗಳೂರು.ಜುಲೈ.02: ಬೆಂಗಳೂರು ದಕ್ಷಿಣ ತಾಲೂಕಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಾದಾಪಟ್ಟಣದಲ್ಲಿ ಗುರುವಾರ ಮುಂಜಾನೆ ಭೀಕರ ದುರಂತವೊಂದು ಸಂಭವಿಸಿದೆ. ಕಲ್ಲು ಕ್ವಾರಿಯಲ್ಲಿ ಜಿಲೆಟಿನ್ ಸ್ಫೋಟದ ತೀವ್ರತೆಗೆ ಬೃಹತ್ ಬಂಡೆಗಳು ಉರುಳಿ ಬಿದ್ದಿದ್ದು, ಬಿಹಾರ ಮೂಲದ ಏಳು ಮಂದಿ ಕಾರ್ಮಿಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆಯಲ್ಲಿ ಐದಕ್ಕೂ ಹೆಚ್ಚು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕನಹಳ್ಳಿ ವ್ಯಾಪ್ತಿಯ ಈ ಕಲ್ಲು ಕ್ವಾರಿಯಲ್ಲಿ ಎಂದಿನಂತೆ ಮುಂಜಾನೆ ವೇಳೆ 15ಕ್ಕೂ ಹೆಚ್ಚು ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಬಂಡೆಗಳನ್ನು ಸೀಳಲು ಬಳಸಲಾದ ಜಿಲೆಟಿನ್ ಕಡ್ಡಿಗಳು ಏಕಾಏಕಿ ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಬೃಹತ್ ಕಲ್ಲುಗಳು ಕಾರ್ಮಿಕರ ಮೇಲೆಯೇ ಉರುಳಿ ಬಿದ್ದಿದ್ದು, ಏಳು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಪರಿಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಕಲ್ಲುಗಳ ಅಡಿಯಲ್ಲಿ ಇನ್ನು ಕೆಲವು ಕಾರ್ಮಿಕರು ಸಿಲುಕಿರುವ ಆತಂಕ ಎದುರಾಗಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







