Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ರಾಜ್ಯಸಭೆ, ಎಂಎಲ್ಸಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ

---Advertisement---

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹೈಕಮಾಂಡ್ ಕೊನೆ ಕ್ಷಣದಲ್ಲಿ ತನ್ನ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಘೋಷಣೆಯೊಂದಿಗೆ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದ್ದ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದ್ದು, ಟಿಕೆಟ್ ಆಕಾಂಕ್ಷಿಗಳಾಗಿದ್ದ ಹಲವು ಪ್ರಮುಖ ನಾಯಕರಿಗೆ ನಿರಾಸೆಯಾಗಿದೆ.

ಅತ್ಯಂತ ಗಮನಾರ್ಹ ಬೆಳವಣಿಗೆಯೆಂದರೆ, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರನ್ನು ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸುವ ರಾಜಕೀಯ ಲೆಕ್ಕಾಚಾರಗಳು ಅಂತಿಮವಾಗಿ ಸಾಕಾರಗೊಂಡಿಲ್ಲ. ಇದರೊಂದಿಗೆ, ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಈ ಬಾರಿ ಅದೃಷ್ಟ ಒಲಿದಿಲ್ಲ.

ರಾಜ್ಯಸಭೆಗೆ ಪ್ರೊ. ಎಂ. ನಾಗರಾಜ್ ಆಯ್ಕೆ

ಬಿಜೆಪಿ ತನ್ನ ಪಾಲಿನ ಒಂದು ರಾಜ್ಯಸಭೆ ಸ್ಥಾನಕ್ಕೆ ಪಕ್ಷದ ಮಾಜಿ ರಾಜ್ಯ ಉಪಾಧ್ಯಕ್ಷ ಪ್ರೊ. ಎಂ. ನಾಗರಾಜ್ ಅವರ ಹೆಸರನ್ನು ಅಂತಿಮಗೊಳಿಸಿದೆ. ಪಕ್ಷದ ಸಂಘಟನೆಯಲ್ಲಿ ದೀರ್ಘಕಾಲದಿಂದ ತೆರೆಯ ಮರೆಯಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ನಾಗರಾಜ್ ಅವರಿಗೆ ಹೈಕಮಾಂಡ್ ಈ ಬಾರಿ ದೊಡ್ಡ ಮನ್ನಣೆ ನೀಡಿರುವುದು ವಿಶೇಷವಾಗಿದೆ.

ವಿಧಾನ ಪರಿಷತ್ತಿಗೆ ಇಬ್ಬರಿಗೆ ಮಣೆ

ಇನ್ನು ಖಾಲಿ ಇರುವ ವಿಧಾನ ಪರಿಷತ್ತಿನ ಎರಡು ಸ್ಥಾನಗಳಿಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಲಾಗಿದ್ದು, ಈ ಕೆಳಗಿನ ಇಬ್ಬರು ನಾಯಕರಿಗೆ ಅವಕಾಶ ನೀಡಲಾಗಿದೆ.

ಲಿಂಗರಾಜ್ ಪಾಟೀಲ್: ಪಕ್ಷದ ಶಿಸ್ತು ಸಮಿತಿಯ ಮಾಜಿ ಉಪಾಧ್ಯಕ್ಷರು.

ರಘು ಕೌಟಿಲ್ಯ: ರಾಜ್ಯ ಒಬಿಸಿ ಮೋರ್ಚಾದ ಹಾಲಿ ಅಧ್ಯಕ್ಷರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now