Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS :  ನಟಿ ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಟಾಲಿನ್ ಬಂಧನ!

---Advertisement---

ಚೆನ್ನೈ.ಆಗಸ್ಟ್.4: ಕಾವೇರಿ ನೀರು ಹಂಚಿಕೆ ಕುರಿತು ನಡೆದ ರೈತರ ಪ್ರತಿಭಟನೆ ವೇಳೆ ಪ್ರಸಿದ್ಧ ನಟಿ ತ್ರಿಷಾ ಕೃಷ್ಣನ್ ಅವರ ಕುರಿತು ಪರೋಕ್ಷವಾಗಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಮಂಗಳವಾರ (ಆಗಸ್ಟ್ 4) ಪೊಲೀಸರು ಬಂಧಿಸಿದ್ದಾರೆ.

ಚೆನ್ನೈನ ನೀಲಂಕರೈನಲ್ಲಿರುವ ಅವರ ನಿವಾಸದಿಂದ ಉದಯನಿಧಿ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ತಂಜಾವೂರಿಗೆ ಕರೆದೊಯ್ಯಲಿದ್ದಾರೆ.

ತಂಜಾವೂರು ತಮಿಳುಗ ವೆಟ್ರಿ ಕಳಗಂ (TVK) ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ ತಂಜಾವೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಉದಯನಿಧಿ ವಿರುದ್ಧ ಮಹಿಳೆಯರ ಬಗ್ಗೆ ನಿಂದನೀಯ ಹಾಗೂ ಮಾನಹಾನಿಕರ ಹೇಳಿಕೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ದೂರಿನ ಬೆನ್ನಲ್ಲೇ ಪೊಲೀಸರು ಬಂಧನ ಕ್ರಮ ಜರುಗಿಸಿದ್ದಾರೆ.

ಉದಯನಿಧಿ ಅವರ ಬಂಧನದ ಹಿನ್ನೆಲೆಯಲ್ಲಿ ಚೆನ್ನೈನ ನೀಲಂಕರೈನಲ್ಲಿರುವ ಅವರ ಮನೆ ಸುತ್ತಲೂ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಈ ವೇಳೆ ಸ್ಥಳಕ್ಕೆ ಜಮಾಯಿಸಿದ ಡಿಎಂಕೆ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತೀವ್ರ ನೂಕಾಟ-ತಳ್ಳಾಟ ಹಾಗೂ ಮಾತಿನ ಚಕಮಕಿ ನಡೆದು ವಾತಾವರಣ ಉದ್ವಿಗ್ನಗೊಂಡಿತ್ತು.

Join WhatsApp

Join Now

Join Telegram

Join Now