ಸುದ್ದಿಒನ್, ಬೆಂಗಳೂರು, ಜೂನ್.03 : ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಾಯಕರಾದ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ನೂತನ ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟದ ಸದಸ್ಯರಿಗೆ ಪ್ರಮಾಣ ವಚನ ಬೋಧಿಸುವಂತೆ ಕೋರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಿಗೆ ಅಧಿಕೃತ ಪತ್ರ ಬರೆದಿದ್ದಾರೆ.
ರಾಜ್ಯಪಾಲರಿಗೆ ಸಲ್ಲಿಸಿರುವ ಈ ಪತ್ರದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಒಟ್ಟು 14 ನಾಯಕರ ಹೆಸರನ್ನು ಪ್ರಮಾಣ ವಚನ ಸ್ವೀಕಾರಕ್ಕಾಗಿ ಪ್ರಸ್ತಾಪಿಸಲಾಗಿದೆ.
ಪ್ರಸ್ತಾವಿತ ಸಚಿವ ಸಂಪುಟದ ಪಟ್ಟಿ ಇಲ್ಲಿದೆ:
ಡಿ.ಕೆ. ಶಿವಕುಮಾರ್ – ಮುಖ್ಯಮಂತ್ರಿ
ಡಾ. ಜಿ. ಪರಮೇಶ್ವರ್ – ಉಪಮುಖ್ಯಮಂತ್ರಿ
ಕೆ.ಎಚ್. ಮುನಿಯಪ್ಪ – ಸಚಿವರು
ಶ್ರೀ ಕೆ.ಜೆ. ಜಾರ್ಜ್ – ಸಚಿವರು
ಎಂ.ಬಿ. ಪಾಟೀಲ್ – ಸಚಿವರು
ರಾಮಲಿಂಗಾರೆಡ್ಡಿ – ಸಚಿವರು

ಸತೀಶ್ ಜಾರಕಿಹೊಳಿ – ಸಚಿವರು
ಕೃಷ್ಣ ಬೈರೇಗೌಡ – ಸಚಿವರು
ಪ್ರಿಯಾಂಕ್ ಖರ್ಗೆ – ಸಚಿವರು
ಯು.ಟಿ. ಖಾದರ್ – ಸಚಿವರು
ಈಶ್ವರ್ ಖಂಡ್ರೆ – ಸಚಿವರು
ಯತೀಂದ್ರ ಸಿದ್ದರಾಮಯ್ಯ – ಸಚಿವರು
ಬೈರತಿ ಸುರೇಶ್ – ಸಚಿವರು
ಶರಣಪ್ರಕಾಶ್ ಪಾಟೀಲ್ – ಸಚಿವರು
ಈ ಪತ್ರಕ್ಕೆ ಸಿಎಲ್ಪಿ ನಾಯಕ ಹಾಗೂ ಪ್ರಸ್ತಾವಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹಿ ಮಾಡಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಂಗಳೂರಿನ ಲೋಕಭವನದಲ್ಲಿರುವ ರಾಜ್ಯಪಾಲರಿಗೆ ವಿನಂತಿಸಿದ್ದಾರೆ. ರಾಜಭವನದಿಂದ ಅಧಿಕೃತ ಮುಹೂರ್ತ ನಿಗದಿಯಾಗುತ್ತಿದ್ದಂತೆ ನೂತನ ಸರ್ಕಾರದ ಪ್ರಮಾಣ ವಚನ ಸಮಾರಂಭ ಜರುಗಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.




















