Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಚಿತ್ರದುರ್ಗ ಜಿಲ್ಲೆಯ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ!

---Advertisement---

ಚಿತ್ರದುರ್ಗ.ಜುಲೈ.08 : ಇಂದು ಚಿತ್ರದುರ್ಗ ಜಿಲ್ಲೆಯ ಎರಡು ಪ್ರತ್ಯೇಕ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಈ ಮಹತ್ವದ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಲೋಕಾಯುಕ್ತ ಅಧಿಕಾರಿಗಳ ತಂಡ ಜಿಲ್ಲೆಯ ಇಬ್ಬರು ಉನ್ನತ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಏಕಕಾಲದಲ್ಲಿ ದಾಳಿ ನಡೆಸಿದೆ. ಹಿರಿಯೂರು ತಾಲೂಕಿನ ಬಬ್ಬರೂ ಗ್ರಾಮದಲ್ಲಿರುವ ಬಬ್ಬೂರು ತೋಟಗಾರಿಕೆ ವಿಶ್ವವಿದ್ಯಾಲಯದ ಪ್ರೊಫೆಸರ್ ಶಂಕರ್ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಚಿತ್ರದುರ್ಗದ ದವಳಗಿರಿ ಬಡಾವಣೆಯಲ್ಲಿರುವ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ (RFO) ದುಗ್ಗಪ್ಪ ಅವರ ಮನೆ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ದೂರುಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ಅವರ ನೇತೃತ್ವದ ತಂಡಗಳು ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now