Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಬಿಹಾರದ ಬಂಕಿಪುರ ಉಪಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಗೆ ಭರ್ಜರಿ ಗೆಲುವು!

---Advertisement---

ಪಟ್ನಾ.ಆಗಸ್ಟ್.3: ರಾಜಕೀಯ ತಂತ್ರಜ್ಞ, ಬಿಹಾರದ ‘ಜನ್ ಸುರಾಜ್’ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಸೋಮವಾರ ನಡೆದ ಅತ್ಯಂತ ಕುತೂಹಲಕಾರಿ ಬಂಕಿಪುರ ವಿಧಾನಸಭೆ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ತಮ್ಮ ನೂತನ ಪಕ್ಷಕ್ಕೆ ಮೊದಲ ರಾಜಕೀಯ ಗೆಲುವನ್ನು ತಂದುಕೊಟ್ಟಿದ್ದಾರೆ.

ತೀವ್ರ ಪೈಪೋಟಿಯಿಂದ ಕೂಡಿದ್ದ ಈ ಕ್ಷೇತ್ರದಲ್ಲಿ ಪ್ರಶಾಂತ್ ಕಿಶೋರ್ ಅವರು ತಮ್ಮ ಸಮೀಪದ ಸ್ಪರ್ಧಿ, ಬಿಜೆಪಿಯ ನೀರಜ್ ಕುಮಾರ್ ಸಿನ್ಹಾ ಅವರನ್ನು 18,953 ಮತಗಳ ಅಂತರದಿಂದ ಸೋಲಿಸಿದ್ದಾರೆ. ಕಿಶೋರ್ ಅವರು 63,203 ಮತಗಳನ್ನು ಪಡೆದರೆ, ನೀರಜ್ ಸಿನ್ಹಾ 44,250 ಮತಗಳನ್ನು ಗಳಿಸಲಷ್ಟೇ ಶಕ್ತರಾದರು. ಆರ್‌ಜೆಡಿಯ ಪೂಜಾ ಗುಪ್ತಾ 14,085 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು.

ಈ ಫಲಿತಾಂಶದೊಂದಿಗೆ ಬಂಕಿಪುರ ಕ್ಷೇತ್ರದಲ್ಲಿ ಕಳೆದ 35 ವರ್ಷಗಳಿಂದ ಇದ್ದ ಬಿಜೆಪಿಯ ಸತತ ಮತ್ತು ಸುದೀರ್ಘ ಅಧಿಪತ್ಯಕ್ಕೆ ತೆರೆಬಿದ್ದಂತಾಗಿದೆ. ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಈ ಗೆಲುವು ಪ್ರಶಾಂತ್ ಕಿಶೋರ್ ಪಡೆಗೆ ದೊಡ್ಡ ರಾಜಕೀಯ ದಿಕ್ಸೂಚಿಯಾಗಿ ಹೊರಹೊಮ್ಮಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now