ದೆಹಲಿ.ಆಗಸ್ಟ್.8: ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಸರಣಿಗೂ ಮುನ್ನವೇ ಭಾರತ ಕ್ರಿಕೆಟ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಯುವ ಬ್ಯಾಟರ್ ಸಾಯಿ ಸುದರ್ಶನ್ ಗಾಯದ ಸಮಸ್ಯೆಯಿಂದಾಗಿ ಇಡೀ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ.
ಸರಣಿ ಆರಂಭಕ್ಕೂ ಮುನ್ನವೇ ಪ್ರಮುಖ ಆಟಗಾರರೊಬ್ಬರು ಗಾಯಗೊಂಡು ಸರಣಿಯಿಂದ ವಂಚಿತರಾಗಿರುವುದು ಟೀಮ್ ಇಂಡಿಯಾಗೆ ಹಿನ್ನಡೆಯಾಗಿ ಪರಿಣಮಿಸಿದೆ.

ತಂಡವು ಶ್ರೀಲಂಕಾಗೆ ತೆರಳುವ ಮುನ್ನವೇ ಕಾಲ್ಬೆರಳಿನ (Toe Injury) ಗಾಯದಿಂದ ಬಳಲುತ್ತಿದ್ದ 24 ವರ್ಷದ ಸಾಯಿ ಸುದರ್ಶನ್, ಚೇತರಿಕೆಗಾಗಿ ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್ (CoE) ನಲ್ಲಿ ಉಳಿದುಕೊಂಡಿದ್ದರು. ಮೊದಲ ಟೆಸ್ಟ್ ಪಂದ್ಯದ ವೇಳೆಗೆ ಚೇತರಿಸಿಕೊಂಡು ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಅವರು ಇಡೀ ಸರಣಿಯಿಂದ ಹೊರಗುಳಿಯಲಿದ್ದಾರೆ.

So Sai Sudarshan has also been ruled out of the Lanka Test series. First Bumrah and now Sai, ruled out after being selected for the tour
— Vikrant Gupta (@vikrantgupta73) August 8, 2026
Sai Sudharsan has been ruled out of the test series vs Sri Lanka due to his injury
— Nitin K Srivastav (@Nitin_sachin) August 8, 2026












