ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಹುಟ್ಟು ಹಬ್ಬದ ದಿನದಂದೆ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿಯಿದಾಗಿದೆ. ನಟ ದರ್ಶನ್ ಅವರಿಗೆ ಕೋರ್ಟ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.
ಮಗಳ ಪರೀಕ್ಷೆ ಕಾರಣಕ್ಕೆ ಪವಿತ್ರ ಗೌಡ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.ಎಸ್ಎಸ್ಎಲ್ಸಿ (SSLC) ಪರೀಕ್ಷೆಯ ಕಾರಣ 25 ದಿನಗಳ ಮಧ್ಯಂತ ಜಾಮೀನು ನೀಡಿ ಎಂದು ಕೋರ್ಟ್ ಅಲ್ಲಿ ಮನವಿ ಮಾಡಿದ್ದರು ಆದರೆ ಕೋರ್ಟ ಇದೀಗ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ಈ ಒಂದು ಅರ್ಜಿ ಕುರಿತು ಇಂದು ವಿಚಾರಣೆ ನಡೆಸಿದ ನ್ಯಾಯಾಧೀಶರು, ಪವಿತ್ರ ಗೌಡಗೆ ಮಧ್ಯಂತರ ಜಾಮೀನು ನೀಡಲು ಇದೀಗ ಕೋರ್ಟ್ ನಿರಾಕರಿಸಿದೆ.
ಈ ಮೊದಲು ಪವಿತ್ರಾ ಅವರು ಮನೆ ಊಟಕ್ಕೆ ಬೇಡಿಕೆ ಇಟ್ಟಿದ್ದರು. ಜೈಲು ಊಟದಿಂದ ಆರೋಗ್ಯ ಸಮಸ್ಯೆ ಆಗುತ್ತಿದೆ ಎಂದು ಹೇಳಿದ್ದರು. ಕೆಲ ದಿನ ಇದಕ್ಕೆ ಅವಕಾಶ ಇತ್ತು. ನಂತರ ಇದನ್ನು ರದ್ದು ಮಾಡಲಾಯಿತು.


