Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING : ಹೊಳಲ್ಕೆರೆ ಕಣಿವೆ ಬಳಿ ಭೀಕರ ಅಪಘಾತ : ಚಿತ್ರದುರ್ಗದ ಉದ್ಯಮಿ ಲೋಹಿತ್ ಪ್ರಸಾದ್ ದಂಪತಿ ದುರ್ಮರಣ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 13 : ಜಿಲ್ಲೆಯ ಹೊಳಲ್ಕೆರೆ ಕಣಿವೆ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿತ್ರದುರ್ಗ ನಗರದ ಸಿದ್ವಿ ಮೋಟಾರ್ಸ್ ಮಾಲೀಕರಾದ ಲೋಹಿತ್ ಪ್ರಸಾದ್ ಮತ್ತು ಅವರ ಪತ್ನಿ ನಿತ್ಯಶ್ರೀ ನಿಧನರಾಗಿದ್ದಾರೆ.

ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಬರುವಾಗ ಹೊಳಲ್ಕೆರೆ ಸಮೀಪದ ಕಣಿವೆ ಬಳಿ ರಾತ್ರಿ 12 ಗಂಟೆ ಸುಮಾರಿಗೆ ಇವರಿದ್ದ ಕಾರು ಎದುರುಗಡೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ. ಚಿತ್ರದುರ್ಗ ನಗರದ ವಿ.ಪಿ. ಬಡಾವಣೆಯ ನಿವಾಸಿ, ಮಾರುತಿ ಗ್ಯಾಸ್ ಮಾಲೀಕರಾದ ಪ್ರಭು ಪ್ರಸಾದ್ ಅವರ ಪುತ್ರ ಲೋಹಿತ್ ಪ್ರಸಾದ್ (ಸಿದ್ವಿ ಮೋಟಾರ್ಸ್ ಮಾಲೀಕರು) ಮತ್ತು ಅವರ ಪತ್ನಿ ನಿತ್ಯಶ್ರೀ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಹೊಳಲ್ಕೆರೆ ಕಣಿವೆ ಬಳಿ ಭೀಕರ ಅಪಘಾತವಾಗಿದೆ ಎನ್ನಲಾಗಿದ್ದು, ಅಪಘಾತದ ತೀವ್ರತೆಗೆ ದಂಪತಿಗಳಿಬ್ಬರೂ ಕೊನೆಯುಸಿರೆಳೆದಿದ್ದಾರೆ. ಪ್ರಭು ಪ್ರಸಾದ್ ಅವರ ಮನೆಯಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಅಂತಿಮ ದರ್ಶನ ನಡೆಯಲಿದ್ದು, ಬಳಿಕ ಚಿತ್ರದುರ್ಗ ತಾಲ್ಲೂಕಿನ ಮುದ್ದಾಪುರ ಬಳಿಯ ಸೂರನಹಳ್ಳಿಯ ಅವರ ತೋಟದಲ್ಲಿ ಸಂಜೆ 4 ಗಂಟೆಗೆ ಅಂತಿಮ ಸಂಸ್ಕಾರ ನೆರವೇರಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now