ಸುದ್ದಿಒನ್, ಚಿತ್ರದುರ್ಗ, ಜುಲೈ. 25 : ರಾಜ್ಯದ ವಿವಿದೆಡೆ ಹೊಸ ಬೋರ್ ವೆಲ್ ಕೊರೆಯುವ ವಿಚಾರದಲ್ಲಿ ಸಾಕಷ್ಟು ದುರ್ಬಳಕೆ ಆಗುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬರುತ್ತಿವೆ. ಹೀಗಾಗಿ ಸಂಬಂಧಪಟ್ಟ ಇಲಾಖೆ ಹೊಸ ಬೋರ್ ವೆಲ್ ಕೊರೆಯುವ ಸಂದರ್ಭದಲ್ಲಿ ಆಯಾ ಶಾಸಕರುಗಳ ಗಮನಕ್ಕೆ ತರಬೇಕು. ಬೋರ್ ಕೊರೆಯುವ ಸಂದರ್ಭದ ವಿಡಿಯೋ, ಫೋಟೋ ಚಿತ್ರೀಕರಣ ಆಗಬೇಕು. ಜಿಪಿಎಸ್ ಕೋ ಆರ್ಡಿನೇಟ್ ಗಳೊಂದಿಗೆ ಸ್ಥಳೀಯರ ಮಹಜರು ಮಾಡಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ನಗರದ ಪ್ರಸಿದ್ಧ ಮುರುಘಾ ಮಠದ ಅನುಭವ ಮಂಟಪದಲ್ಲಿ ಶನಿವಾರ ಆಯೋಜಿಸಲಾಗಿದ್ದ ‘ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆ’ಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ಸೂಚಿಸಿದರು.








