Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾನು ಸಂಸದನಾಗಿದ್ದಾಗ ಅನುಮೋದನೆಗೊಂಡ ಸೇತುವೆ : ಯಡಿಯೂರಪ್ಪ

---Advertisement---

ಶಿವಮೊಗ್ಗ: ಇಂದು ಸಿಗಂಧೂರು ಸೇತುವೆ ಲೋಕಾರ್ಪಣೆಗೊಂಡಿದೆ. ಈ ವೇಳೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸೇತುವೆ ಬಗ್ಗೆ ಮಾಯನಾಡಿದ್ದಾರೆ.

ಈ ಸುಂದರ ಸೇತುವೆ ಲೋಕಾರ್ಪಣೆಗೊಂಡಿದೆ. ಈ ಸಂತೋಷದ ಹಾಗೂ ಸಾರ್ಥಕ ಸಮಾರಂಭದಲ್ಲಿ ಅತ್ಯಂತ ಸಂತೃಪ್ತಿ ತಂದಿದೆ. ನಾನು ಸಂಸದನಾಗಿದ್ದಾಗ ಅನುಮೋದನೆಗೊಂಡ ಈ ಯೋಜನೆ ಇಂದಿ ಸಾಕಾರಗೊಂಡಿದೆ. ಈ ಸೇತುವೆ ಈ ಭಾಗದ ಜನರ ಕನಸು, ಬಹು ವರ್ಷಗಳ ಬೇಡಿಕೆಯಾಗಿತ್ತು. ಅದು ಇಂದು ನನಸಾಗಿದೆ. ಶರಾವತಿ ಹಿನ್ನೀರಿನಿಂದಾಗಿ ಸ್ಥಳಾಂತರಗೊಂಡ ಸಂತ್ರಸ್ತರ ನ್ಯಾಯ ಮತ್ತು ಗೌರವಕ್ಕೆ ಈ ಸೇತುವೆ ಸಾಕ್ಷಿಯಾಗಿದೆ.

ನಮ್ಮ ಜಿಲ್ಲೆಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ, ಇಡೀ ದೇಶಕ್ಕೆ ಈ ಸೇತುವೆ ಒಂದು ಪ್ರಗತಿಯ ಐತಿಹಾಸಿಕ ಮೈಲಿಗಲ್ಲಾಗಲಿದೆ. ಇದು ಕೇವಲ ಸೇತುವೆಯಲ್ಲ, ಜನರ ವಿಶ್ವಾಸ, ಜನಪ್ರತಿನಿಧಿಗಳ ಪರಿಶ್ರಮ ಮತ್ತು ಅಭಿವೃದ್ಧಿಯ ಪರಿಕಲ್ಪನೆಯ ಸಾಕಾರವಾಗಿದೆ. ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇವತ್ತು ಇಡೀ ದೇಶ ಒಂದಾಗಿ ವಿಕಸಿತ ಭಾರತದ ಗುರಿಯನ್ನು ನನಸಾಗಲು ಶ್ರಮಿಸುತ್ತಾ ಇದೆ. ಹಾಗೇ ನಮ್ಮ ಕೇಂದ್ರದ ಸಚಿವರಾಗಿರುವ ನಿತಿನ್ ಗಡ್ಕರಿ ಅವರು ವಿಶೇಷವಾಗಿ ನಮ್ಮ ಕರ್ನಾಟಕದ ಎಲ್ಲಾ ಅಭಿವೃದ್ಧಿ ಯೋಜನೆಗಳಿಗೆ ನಿರಂತರ ಬೆಂಬಲ ನೀಡುತ್ತಾ ಬಂದಿದ್ದಾರೆ.

 

ನಮ್ಮ ಪ್ರಹ್ಲಾದ್ ಜೋಶಿ ಅವರು ಕೂಡ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಬೆಂಬಲವಾಗಿ ನಿಂತಿದ್ದಾರೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಇದು ನಮ್ಮ ಧ್ಯೇಯ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ನರೇಂದ್ರ ಮೋದಿಯವರ ಸರ್ಕಾರ ಬದ್ಧವಾಗಿ ನಿಂತಿದೆ. ಅದಕ್ಕೆ ಈ ಸೇತುವೆಯೇ ಉದಾಹರಣೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...