ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ರಾಮ ಮಂದಿರ ಉದ್ಘಾಟನೆ ಸಮಯದಲ್ಲಿಯೇ ಹಿಂದೂಗಳ ಟಾರ್ಗೆಟ್ ಪ್ರಶ್ನೆಗೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದೆ. ನಾನು ಅಲ್ಲಿದ್ದು ವಿತ್ ಡ್ರಾ ಮಾಡೋಕೆ ಪ್ರಯತ್ನ ಪಟ್ಟಂತ ವ್ಯಕ್ತಿ. ಷಡ್ಯಂತ್ರ ಮಾಡವ್ರೆ ಅಂದರೆ ಏನು ಷಡ್ಯಂತ್ರ ಅಂತ ಹೇಳಿ ಬಿಡಲಿ. ರಾಜ್ಯದಲ್ಲಿ ಎಷ್ಟು ಮಂದಿ ಅವರೆ ಹಿಂದುಗಳು ಇದಾರ್ರೀ. ಏಳು ಕೋಟಿ ಜನಸಂಖ್ಯೆ ಇದೆ. 8% ಜನಸಂಖ್ಯೆ ಹಿಂದೂಗಳೇ ಇದಾರೆ. ಒಬ್ಬ ವ್ಯಕ್ತಿಯನ್ನು ಅರೆಸ್ಟ್ ಮಾಡಿದರೆ ಐದಾರು ಕೋಟಿ ಜನರಿಗೆ ತೊಂದರೆ ಆಯ್ತಾ..? ಅರ್ಥ ಏನು ಇದಕ್ಕೆ. ಹಿಂದೂ ಮುಸ್ಲಿಂ ಅಂತ ಡಿವೈಡ್ ಮಾಡೋದೇ ಆಯ್ತು ನಿಮ್ಮದು ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಮಣಿಕಂಠ ರಾಥೋಡ್ ಎಂಬ ವ್ಯಕ್ತಿ. 80 ಕ್ರಿಮಿನಲ್ ಕೇಸ್ ಇದೆ. ಅವನು ರೌಡಿಶೀಟರ್ ಲೀಸ್ಟ್ ನಲ್ಲಿದ್ದಾನೆ. ಅವರನ್ನು ತೆಗೆದುಕೊಂಡು ಪ್ರಿಯಾಂಕ್ ಖರ್ಗೆ ಎದುರು ಸ್ಪರ್ಧೆಗೆ ನಿಲ್ಲಿಸುತ್ತಾರೆ. ಕಾನೂನು ರೀತಿ ಹೋರಾಟ ಮಾಡಿ, ಜಾಮೀನು ತೆಗೆದುಕೊಳ್ಳಿ. ವಿಷಯ ಕೋರ್ಟ್ ನಲ್ಲಿದೆ. ಜನ ಅರ್ಥ ಮಾಡಿಕೊಳ್ಳುತ್ತಾರೆ. ಕಾಂಗ್ರೆಸ್ ಅನ್ನ ಹಿಂದೂ ವಿರೋಧಿ ಅಂತ ಬಿಜೆಪಿ ಹೋರಾಟ ಮಾಡುತ್ತಾ ಇದೆಯಲ್ಲ, ಧಾರ್ಮಿಕವಾದ ವಿಚಾರದ ಮೇಲೆ ಕ್ಷಣಿಕ ಗೆಲುವು ಸಾಧಿಸಿದೆ.
ಬಿಜೆಪಿಯವರು ಬೀದಿಗೆ ಇಳಿದು ಹೋರಾಟ ಮಾಡುತ್ತಾ ಇದಾರಲ್ಲ, ಕರಸೇವಕರ ಬಗ್ಗೆ ಬಹಳಷ್ಟು ಅಭಿಮಾನದಿಂದ ಮಾತನಾಡುತ್ತಾ ಇದಾರಲ್ಲ. ಆ ಕರಸೇವಕರ ಮೇಲೆ ಇರುವಂತ ಕೇಸನ್ನ ಅವರು ಯಾಕೆ ವಿತ್ ಡ್ರಾ ಮಾಡುವುದಕ್ಕೆ ಪ್ರಯತ್ನ ಪಡಲಿಲ್ಲ. ಆಗ ಬಿಜೆಪಿಯೇ ಅಧಿಕಾರದಲ್ಲಿಯೇ ಇತ್ತು. ಆಗ ಯಾರೂ ಕೆಲಸ ಮಾಡುವುದಿಲ್ಲ. ಆದರೆ ಇಂಥ ಘಟನೆಯಾದಾಗ ಹೋರಾಟ ಮಾಡುವುದಕ್ಕೆ ನಿಂತು ಬಿಡುತ್ತಾರೆ. ಹಿಂದೂ ಮುಸ್ಲಿಂ ವಿಚಾರ ತೆಗೆದುಕೊಂಡು ಎಲೆಕ್ಷನ್ ಉಪಯೋಗ ಪಡೆದುಕೊಳ್ಳುತ್ತಾರೆ. ಇದರಲ್ಲಿ ಪ್ರಹ್ಲಾದ್ ಜೋಶಿ ಕೈವಾಡವೂ ಇದೆ ಎಂದು ಬಿಜೆಪಿ ವಿರುದ್ದ ಆಕ್ರೋಶ ಹೊರ ಹಾಕಿದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್