Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಧಾರ್ಮಿಕ ವಿಚಾರ ತರುವುದು ಎಲೆಕ್ಷನ್ ಗಾಗಿ ಮಾತ್ರ : ಬಿಜೆಪಿ ಬಗ್ಗೆ ಜಗದೀಶ್ ಶೆಟ್ಟರ್ ಶಾಕಿಂಗ್ ಹೇಳಿಕೆ

---Advertisement---

ಬೆಂಗಳೂರು: ರಾಮ ಮಂದಿರ ಉದ್ಘಾಟನೆ ಸಮಯದಲ್ಲಿಯೇ ಹಿಂದೂಗಳ ಟಾರ್ಗೆಟ್ ಪ್ರಶ್ನೆಗೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದೆ. ನಾನು ಅಲ್ಲಿದ್ದು ವಿತ್ ಡ್ರಾ ಮಾಡೋಕೆ ಪ್ರಯತ್ನ ಪಟ್ಟಂತ ವ್ಯಕ್ತಿ. ಷಡ್ಯಂತ್ರ ಮಾಡವ್ರೆ ಅಂದರೆ ಏನು ಷಡ್ಯಂತ್ರ ಅಂತ ಹೇಳಿ ಬಿಡಲಿ. ರಾಜ್ಯದಲ್ಲಿ ಎಷ್ಟು ಮಂದಿ ಅವರೆ ಹಿಂದುಗಳು ಇದಾರ್ರೀ. ಏಳು ಕೋಟಿ ಜನಸಂಖ್ಯೆ ಇದೆ. 8% ಜನಸಂಖ್ಯೆ ಹಿಂದೂಗಳೇ ಇದಾರೆ. ಒಬ್ಬ ವ್ಯಕ್ತಿಯನ್ನು ಅರೆಸ್ಟ್ ಮಾಡಿದರೆ ಐದಾರು ಕೋಟಿ ಜನರಿಗೆ ತೊಂದರೆ ಆಯ್ತಾ..? ಅರ್ಥ ಏನು ಇದಕ್ಕೆ. ಹಿಂದೂ ಮುಸ್ಲಿಂ ಅಂತ ಡಿವೈಡ್ ಮಾಡೋದೇ ಆಯ್ತು ನಿಮ್ಮದು ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಮಣಿಕಂಠ ರಾಥೋಡ್ ಎಂಬ ವ್ಯಕ್ತಿ. 80 ಕ್ರಿಮಿನಲ್ ಕೇಸ್ ಇದೆ. ಅವನು ರೌಡಿಶೀಟರ್ ಲೀಸ್ಟ್ ನಲ್ಲಿದ್ದಾನೆ. ಅವರನ್ನು ತೆಗೆದುಕೊಂಡು ಪ್ರಿಯಾಂಕ್ ಖರ್ಗೆ ಎದುರು ಸ್ಪರ್ಧೆಗೆ ನಿಲ್ಲಿಸುತ್ತಾರೆ. ಕಾನೂನು ರೀತಿ ಹೋರಾಟ ಮಾಡಿ, ಜಾಮೀನು ತೆಗೆದುಕೊಳ್ಳಿ. ವಿಷಯ ಕೋರ್ಟ್ ನಲ್ಲಿದೆ. ಜನ ಅರ್ಥ ಮಾಡಿಕೊಳ್ಳುತ್ತಾರೆ. ಕಾಂಗ್ರೆಸ್ ಅನ್ನ ಹಿಂದೂ ವಿರೋಧಿ ಅಂತ ಬಿಜೆಪಿ ಹೋರಾಟ ಮಾಡುತ್ತಾ ಇದೆಯಲ್ಲ, ಧಾರ್ಮಿಕವಾದ ವಿಚಾರದ ಮೇಲೆ ಕ್ಷಣಿಕ ಗೆಲುವು ಸಾಧಿಸಿದೆ.

 

ಬಿಜೆಪಿಯವರು ಬೀದಿಗೆ ಇಳಿದು ಹೋರಾಟ ಮಾಡುತ್ತಾ ಇದಾರಲ್ಲ, ಕರಸೇವಕರ ಬಗ್ಗೆ ಬಹಳಷ್ಟು ಅಭಿಮಾನದಿಂದ ಮಾತನಾಡುತ್ತಾ ಇದಾರಲ್ಲ. ಆ ಕರಸೇವಕರ ಮೇಲೆ ಇರುವಂತ ಕೇಸನ್ನ ಅವರು ಯಾಕೆ ವಿತ್ ಡ್ರಾ ಮಾಡುವುದಕ್ಕೆ ಪ್ರಯತ್ನ ಪಡಲಿಲ್ಲ. ಆಗ ಬಿಜೆಪಿಯೇ ಅಧಿಕಾರದಲ್ಲಿಯೇ ಇತ್ತು. ಆಗ ಯಾರೂ ಕೆಲಸ ಮಾಡುವುದಿಲ್ಲ. ಆದರೆ ಇಂಥ ಘಟನೆಯಾದಾಗ ಹೋರಾಟ ಮಾಡುವುದಕ್ಕೆ ನಿಂತು ಬಿಡುತ್ತಾರೆ. ಹಿಂದೂ ಮುಸ್ಲಿಂ ವಿಚಾರ ತೆಗೆದುಕೊಂಡು ಎಲೆಕ್ಷನ್ ಉಪಯೋಗ ಪಡೆದುಕೊಳ್ಳುತ್ತಾರೆ. ಇದರಲ್ಲಿ ಪ್ರಹ್ಲಾದ್ ಜೋಶಿ ಕೈವಾಡವೂ ಇದೆ ಎಂದು ಬಿಜೆಪಿ ವಿರುದ್ದ ಆಕ್ರೋಶ ಹೊರ ಹಾಕಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment