ಬೆಂಗಳೂರು: ಬಜೆಟ್ ಮೇಲಿನ ಚರ್ಚೆ ವೇಳೆ ವಿಧಾನಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾಲೆಳೆದಿದ್ದಾರೆ. ಪಂಚರಾಜ್ಯ ಚುನಾವಣೆಯಲಿ ಕಾಂಗ್ರೆಸ್ ಸೋತಿರುವುದನ್ನ ಗೇಲಿ ಮಾಡಿದ್ದಾರೆ.
ಕಾಂಗ್ರೆಸ್ ನಾಯಕರ ಹೇಳಿಕೆಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಸಿಎಂ ಸ್ಥಾನಕ್ಕೆ ನಾನು ಸ್ವಯಂಪ್ರೇರಿತನಾಗಿ ರಾಜೀನಾಮೆ ನೀಡಿದ್ದೇನೆ. ನಾವೆಲ್ಲಾ ಸೇರಿಯೇ ಬೊಮ್ಮಾಯಿ ಅವರನ್ನ ಸಿಎಂ ಮಾಡಿದ್ದೇವೆ. ಈ ವಿಚಾರ ರಾಜ್ಯದ ಜನರಿಗೂ ಗೊತ್ತಿದೆ ಎಂದಿದ್ದಾರೆ.
ಇನ್ನು ಇದೇ ವೇಳೆ ಸಿದ್ದರಾಮಯ್ಯ ಅವರ ಕಾಲೆಳೆದಿರುವ ಯಡಿಯೂರಪ್ಪ ಅವರು, ಸಿದ್ದರಾಮಯ್ಯ ಅವರೇ ನೀವೂ ಮತ್ತೆ ವಿಪಕ್ಷದಲ್ಲೇ ಇದ್ದರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಧೂಳಿಪಟವಾಗುತ್ತದೆ. ಕಾಂಗ್ರೆಸ್ ಧೂಳಿಪಟವಾಗುವ ನೋವು ನನಗೂ ಇದೆ. ಆದರೆ ಆ ನೋವು ನಿಮಗೆ ಇದೆಯೋ ಇಲ್ಲವೋ ಗೊತ್ತಿಲ್ಲ. ದೇಶದಲ್ಲಿ ಕಾಂಗ್ರೆಸ್ ಅಡ್ರೆಸ್ ಗೆ ಇಲ್ಲವಲ್ಲ. ನಿಮ್ಮ ನಾಯಕರು ಯಾರು ಸ್ವಾಮಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಪ್ರಶ್ನಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…