ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿಕ್ಕಮಗಳೂರು: ಕೇಂದ್ರ ಸಚಿವೆಯಾಗಿರುವ ಶೋಭ ಕರಂದ್ಲಾಜೆ ಸ್ಪರ್ಧೆಗೆ ಚಿಕ್ಕಮಗಳೂರಿನ ಕೆಲ ಬಿಜೆಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಗೋ ಬ್ಯಾಕ್ ಶೋಭ ಕರಂದ್ಲಾಜೆ ಅಭಿಯಾನವನ್ನು ಶುರು ಮಾಡಿದ್ದಾರೆ. ಅದರ ಜೊತೆಗೆ ಹೈಕಮಾಂಡ್ ನಾಯಕರಿಗೂ ಪತ್ರ ಬರೆದಿದ್ದಾರೆ. ಈ ಬೆಳವಣಿಗೆಯ ನಡುವೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಚಿಕ್ಕಮಗಳೂರಿಗೆ ಭೇಟಿ ನೀಡಿದ್ದಾರೆ. ಅಲ್ಲಿನ ಕಾರ್ಯಕರ್ತರಿಗೆ ಈ ಬಾರಿಯೂ ಶೋಭಾ ಕರಂದ್ಲಾಜೆಗೆ ಟಿಕೆಟ್ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ.
ಸಭೆ ನಡೆಸಿ ಮಾತನಾಡಿದ ಯಡಿಯೂರಪ್ಪ, ಇಮಥ ಅಭಿಯಾನಕ್ಕೆಲ್ಲ ಹೆದರಬೇಕಿಲ್ಲ. ಶೋಭಾ ಕರಂದ್ಲಾಜೆ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಇನ್ನು ಮೂರು ದಿನದಲ್ಲಿ ಎಲ್ಲವೂ ಗೊತ್ತಾಗಲಿದೆ. ಶೋಭಾ ಕರಂದ್ಲಾಜೆ ಮೋದಿ ಸಂಪುಟದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಈ ಬಾರಿಯೂ ಶೋಭಾ ಕರಂದ್ಲಾಜೆ ಗೆಲ್ಲುತ್ತಾರೆ. ಈ ರೀತಿಯ ಅಭಿಯಾನವೆಲ್ಲಾ ಷಡ್ಯಂತ್ರದ ಒಂದು ಭಾಗವಷ್ಟೇ ಎಂದಿದ್ದಾರೆ.
ಈ ಮೂಲಕ ಯಡಿಯೂರಪ್ಪ ಅವರು ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಪಕ್ಷದಲ್ಲಿ ಭಾರೀ ಪೈಪೋಟಿ ನಡೆಯುತ್ತಿದೆ. ಅದರಲ್ಲೂ ಮುಖ್ಯವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಮಾಜಿ ಶಾಸಕ ಸಿಟಿ ರವಿ ಬಣಗಳ ನಡುವಣ ಸಂಘರ್ಷ ತಾರಕಕ್ಕೇರಿದೆ. ಶೋಭಾ ಕರಂದ್ಲಾಜೆ ವಿರುದ್ಧ ‘ಗೋ ಬ್ಯಾಕ್ ಶೋಭಾ’ ಅಭಿಯಾನದ ಮುಂದುವರಿದ ಭಾಗವಾಗಿ ಇದೀಗ ‘ಹಠಾವೋ ಅಭಿಯಾನ’ ಆರಂಭಗೊಂಡಿದೆ. ಪತ್ರ ಅಭಿಯಾನ, ಗೋ ಬ್ಯಾಕ್ ಶೋಭಾ ಅಭಿಯಾನದ ಜೊತೆ ಬಿಜೆಪಿ ಬಚಾವೋ ಅಭಿಯಾನ ಆರಂಭವಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್