ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: 2006-07ರ ಅವಧಿಯಲ್ಲಿ ಯಡಿಯೂರಪ್ಪ ಅವರು ಉಪ ಮುಖ್ಯಮಂತ್ರಿಯಾಗಿದ್ದರು. ಈ ವೇಳೆ ಕಾನೂನಿಗೆ ವಿರುದ್ಧವಾಗಿ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮದಲ್ಲಿ ಎ.ಮಟು ಎಕರೆ ಹತ್ತು ಗುಂಟೆ ಜಮೀನನ್ನು ಡಿನೋಟಿಫಿಕೇಷನ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆ ಸಂಬಂಧ ಕೇಸ್ ಕೂಡ ದಾಖಲಾಗಿತ್ತು. ಇದೀಗ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಈ ಪ್ರಕರಣದಿಂದ ಮುಕ್ತಿ ಸಿಕ್ಕಿದೆ.
ಕರ್ನಾಟಕ ಹೈಕೋರ್ಟ್ ಈ ಕೇಸನ್ನು ರದ್ದು ಮಾಡಿದೆ. ಸಿಎಜಿ ವರದಿ ಆಧರಿಸಿ 15 ಪ್ರಕರಣಗಳನ್ನು ಹೈಕೋರ್ಟ್ ರದ್ದು ಮಾಡಿತ್ತು. ಸಿಎಜಿ ವರದಿಯ ಆಧಾರದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಸಿಎಂ ಮಾಡಿದ ಮನವಿಯ ಮೇರೆಗೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಈ ಆದೇಶ ನೀಡಿದ್ದಾರೆ.

2015ರಲ್ಲಿ ನ್ಯಾಯಾಲಯದ ಸಮನ್ವಯ ಪೀಠವೂ ಈಗಾಗಲೇ ಆರೋಪಗಳನ್ನು ಪರಿಹರಿಸಿದೆ ಎಂದು ಯಡಿಯೂರಪ್ಪ ಪರ ವಕೀಲ ಸಂದೀಪ್ ಎಸ್ ಪಾಟೀಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದ ಪರ ಬಕೀಲರಾದ ಬಿಎಸ್ ಪ್ರಸಾದ್ ಮತ್ತು ಕೆಪಿ ಯಶೋಧ ವಾದ ಮಂಡಿಸಿದರು. ಹೆಚ್ಚುವರಿ ಸಾಲಿಸಿಟರ್ ಜನರಲ್ ಎಚ್ ಶಾಂತಿ ಭೂಷಣ್ ಸಿಎಜಿ ಪರವಾಗಿ ವಾದ ಮಂಡಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್