ವಿದೇಶ ಪ್ರಯಾಣದಲ್ಲಿದ್ದ ಕುಮಾರಸ್ವಾಮಿ, ಯಡಿಯೂರಪ್ಪ ರಾಜ್ಯಕ್ಕೆ ವಾಪಸ್ : ಏರ್ಪೋರ್ಟ್ ನಲ್ಲಿ ಡಿಕೆಶಿ, ಬಿಎಸ್ವೈ ಮುಖಾಮುಖಿ

1 Min Read

 

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು ಇತ್ತಿಚೆಗೆ ವಿದೇಶಿ ಪ್ರವಾಸಕ್ಕೆ ಪ್ರಯಾಣ ಬೆಳೆಸಿದ್ದರು. ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಯೂರೋಪ್ ಗೆ ಹೋಗಿದ್ದರೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕುಟುಂಬ ಸಮೇತರಾಗಿ ದುಬೈಗೆ ಪ್ರವಾಸಕ್ಕೆ ಹೋಗಿದ್ದರು. ಈಗ ಇಬ್ಬರು ವಾಪಾಸ್ ಆಗಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರು ಇಂದು ಏರ್ಪೋರ್ಟ್ ಗೆ ಬಂದಿಳಿದಿದ್ದಾರೆ. ಇದೇ ವೇಳೆ ದೆಹಲಿಗೆ ಹೋಗಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೂಡ ಏರ್ಪೋರ್ಟ್ ನಲ್ಲಿ ಇಳಿದಿದ್ದಾರೆ. ಹೀಗಾಗಿ ಇಬ್ಬರು ಮುಖಾಮುಖಿಯಾಗಿದ್ದಾರೆ.

ರಾಜಕಾರಣಿಗಳಿಗೆ ರಾಜಕೀಯವೇ ಬೇರೆ, ಸಂಬಂಧಗಳೇ ಬೇರೆ ಅನ್ನೋದು ಆಗಾಗ ಅವರು ಹೇಳುತ್ತಿರುತ್ತಾರೆ, ಅದರಂತೆಯೇ ನಡೆದುಕೊಳ್ಳುತ್ತಿರುತ್ತಾರೆ. ಇದೀಗ ಅದನ್ನು ಮತ್ತೆ ಪ್ರೂವ್ ಮಾಡಿದ್ದಾರೆ. ಏರ್ಪೋರ್ಟ್ ನಲ್ಲಿ ಸಿಕ್ಕ ಹಿರಿಯ ನಾಯಕನನ್ನು ಕಂಡು ಡಿಕೆ ಶಿವಕುಮಾರ್ ಮಾತನಾಡಿಸಿದ್ದಾರೆ. ಉಭಯ ನಾಯಕರು ಕುಶಲೋಪರಿ ವಿಚಾರಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *