Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಲಿಂಗಾಯತರು ಸಿಎಂ ಯಾಕೆ ಆಗಬಾರದು ಶಾಮನೂರು ಮಾತಿಗೆ ಬೆಂಬಲ ನೀಡಿದ ಬಿಎಸ್ವೈ..!

---Advertisement---

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಮನೂರು ಶಿವಶಂಕರಪ್ಪ ಹೇಳಿದ ಮಾತು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬರೀ ಕಾಂಗ್ರೆಸ್ ನಲ್ಲಿ ಮಾತ್ರವಲ್ಲ ಬಿಜೆಪಿ ನಾಯಕರು ಈ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಲಿಂಗಾಯತ ಸಮುದಾಯದವರಿಗೆ ಒಳ್ಳೆ ಸ್ಥಾನಮಾನ ಸಿಗುತ್ತಿಲ್ಲ, ಲಿಂಗಾಯತರು ಯಾಕೆ ಸಿಎಂ ಆಗಬಾರದು ಎಂದು ಕೇಳಿದ್ದರು.

ಇದೀಗ ಶಾಮನೂರು ಶಿವಶಂಕರಪ್ಪ ಅವರ ಮಾತಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬೆಂಬಲ ಸೂಚಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷರು. ಇವರ ಈ ಹೇಳಿಕೆಗೆ ಫುಲ್ ಸಪೋರ್ಟ್ ಇದೆ. ಅವರು ಮಾತನಾಡಿರುವುದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರು, ನಾನು ಎಲ್ಲೂ ಸರ್ಕಾರ ಸರಿ ಇಲ್ಲ ಎಂದಿಲ್ಲ.‌ ಆದರೆ ಕಾಂಗ್ರೆಸ್ ನಿಂದ ವೀರಶೈವ ಲಿಂಗಾಯತರ ಕಡೆಗಣನೆ ಆಗುತ್ತಿದೆ. ನಮ್ಮವರಿಗೆ ಅನ್ಯಾಯವಾದರೆ ಸುಮ್ಮನೆ ಆಗಬೇಕೆ..? ಸರ್ಕಾರಕ್ಕೆ ಎಚ್ಚರಿಕೆ ಕೊಡಬೇಕು. ವೀರಶೈವ ಲಿಂಗಾಯತ ಸಮುದಾಯ ಬಹಳ ದೊಡ್ಡದಿದೆ ಎಂದಿದ್ದರು. ಈ ಮಾತಿಗೆ ಕಾಂಗ್ರೆಸ್ ನಲ್ಲೂ ಇದಕ್ಕೆ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ, ಲಕ್ಷ್ಮೀ ಹೆಬ್ಬಾಳ್ಕರ್ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಸರ್ಕಾರದಲ್ಲಿ ಲಿಂಗಾಯತ ಮಂತ್ರಿಗಳೇ ಹೆಚ್ಚಾಗಿ ಇದ್ದಾರೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...