ಯಡಿಯೂರಪ್ಪ ರಾಜೀನಾಮೆ ಕೊಟ್ಟಾಗ ಅತ್ತಿದ್ದು ಅದಕ್ಕಲ್ಲ : ಬಿ ವೈ ರಾಘವೇಂದ್ರ ಹೇಳಿದ್ದೇನು..?

suddionenews
1 Min Read

ಹಾವೇರಿ : ಬಿಎಸ್ವೈ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಾಗ ಕಣ್ಣೀರು ಹಾಕಿದ್ದು ಎಲ್ಲರಿಗೂ ಗೊತ್ತು. ಅಷ್ಟೇ ಅಲ್ಲ ಆ ಹುದ್ದೆಯಲ್ಲಿದ್ದವರು ಹೊರ ನಡೆಯುವಾಗ ಎಂಥವರಿಗೆ ಆದ್ರೂ ನೋವಾಗೋದು ಸಹಜ, ಕಣ್ಣೀರು ಬರೋದು ಸಹಜ. ಆ ಕಣ್ಣೀರಿಗೆ ನಾನಾ ಅರ್ಥಗಳನ್ನು ಕಲ್ಪಿಸಲಾಗಿತ್ತು. ಈ ಬಿಎಸ್ವೈ ಪುತ್ರ ಬಿ ವೈ ರಾಘವೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕಲಗುಡ್ಡಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ ಪರ ಪ್ರಚಾರ ಮಾಡಲು ತೆರಳಿದ್ದಾರೆ. ಈ ವೇಳೆ ತಂದೆ ಬಗ್ಗೆ ಮಾತನಾಡಿದ್ದು, ರಾಜೀನಾಮೆ ಕೊಟ್ಟಾಗ ಯಡಿಯೂರಪ್ಪ ಕಣ್ಣೀರು ಹಾಕಿದ್ದು ಭಾವನಾತ್ಮಕವಾಗಿ, ಅದನ್ನು ಯಡಿಯೂರಪ್ಪ ಅವರೇ ಈಗಾಗಲೇ ಹಲವು ಬಾರಿ ಸ್ಪಷ್ಟಪಡಿಸಿದ್ದಾರೆ. ವಿರೋಧ ಪಕ್ಷದವರು ಬರಿ ಸುಳ್ಳು ಹೇಳುತ್ತಿದ್ದಾರೆ. ನನ್ನನ್ನು ಮೂರು ಬಾರಿ ಸಂಸದನನ್ನಾಗಿ ಮಾಡಿದ್ದಾರೆ. ವಿಜಯೇಂದ್ರ ಉಪಾಧ್ಯಕ್ಷ ಆಗಿದ್ದಾರೆ. ನಮ್ಮನ್ನೆಲ್ಲಾ ಬೆಳೆಸುವ ಕೆಲಸವನ್ನು ಪಕ್ಷ ಮಾಡಿದೆ. ಪಕ್ಷ ನಮ್ಮನ್ನ ಚಿವುಟ ಕೆಲಸ ಮಾಡಿಲ್ಲ ಎಂದಿದ್ದಾರೆ.

ಇನ್ನು ಈ ಬಾರಿಯ ಉಪಚುನಾವಣೆಯಲ್ಲೂ ಗೆಲ್ಲೋದು ಸತ್ಯ ಎಂದಿದ್ದಾರೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ಕೊಟ್ಟ ಕಾರ್ಯಕ್ರಮಗಳು. ಪ್ರಧಾನಿ ಮೋದಿಯವರು ಕೊಟ್ಟ ಕಾರ್ಯಕ್ರಮಗಳು ಜನರ ಮನೆ ಮನೆಗೆ ಮುಟ್ಟಿವೆ. ಹೀಗಾಗಿ ನಾವೂ ಗೆಲ್ಲುತ್ತೇವೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *