ಚಿತ್ರದುರ್ಗದಲ್ಲಿ ಕಲಾ ಗ್ಯಾಲರಿ ನಿರ್ಮಿಸಿ : ಕಲಾವಿದರು ಮತ್ತು ಕಲಾಭಿಮಾನಿಗಳಿಂದ ಜಿಲ್ಲಾಧಿಕಾರಿಗೆ ಮನವಿ

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.28) : ಕಲೆ, ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಕಲಾ ವೈಭವಗಳ ತವರೂರು ಚಿತ್ರದುರ್ಗದಲ್ಲಿ ಕಲಾ ಗ್ಯಾಲರಿಯನ್ನು ನಿರ್ಮಿಸುವಂತೆ ಜಿಲ್ಲೆಯ ಚಿತ್ರ ಕಲಾವಿದರು ಮತ್ತು ನಗರದ ಕಲಾಭಿಮಾನಿಗಳು ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಪುಷ್ಕರಣಿಗಳು, ನೀರಿನ ಹೊಂಡಗಳು, ಗಿರಿಧಾಮ, ಕೋಟೆ ಕೊತ್ತಲಗಳಿಂದ ಕಂಗೊಳಿಸುವ ಚಿತ್ರ ಚಿತ್ತಾರಗಳು ಕಲಾ ರಸಿಕರನ್ನು ಮೊದಲಿನಿಂದಲೂ ಸೆಳೆದಿರುವ ಐತಿಹಾಸಿಕ ಚಿತ್ರದುರ್ಗದಲ್ಲಿ ಕಲೆಯನ್ನು ಜೀವಂತವಾಗಿರಿಸಬೇಕಾಗಿರುವುದರಿಂದ ಕಲಾ ಗ್ಯಾಲರಿಯನ್ನು ನಿರ್ಮಿಸಬೇಕಾಗಿದೆ. ಇಲ್ಲದಿದ್ದರೆ ನಗರ ಹಾಗೂ ಜಿಲ್ಲೆಯ ಕಲಾವಿದರಿಂದ ರೂಪುಗೊಂಡ ಕಲೆ ಮತ್ತು ಚಿತ್ರಗಳು ಕಾಲಗರ್ಭದಲ್ಲಿ ಗೆದ್ದಲು ಹಿಡಿದು ನಾಮಾವಶೇಷವಾಗಿ ಉಳಿಯಲಿರುವ ಅಪೂರ್ವ ಹಾಗೂ ಅಮೂಲ್ಯ ಚಿತ್ರಗಳನ್ನು ಸಂರಕ್ಷಿಸಿದಂತಾಗುತ್ತದೆಂದು ಜಿಲ್ಲಾಧಿಕಾರಿಯವರಲ್ಲಿ ವಿನಂತಿಸಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು ನಗರದಲ್ಲಿ ಎಲ್ಲಯಾದರೂ ಸ್ಥಳದ ಅವಕಾಶವಿದ್ದರೆ ಖಂಡಿತವಾಗಿ ಕಲಾ ಗ್ಯಾಲರಿಯನ್ನು ನಿರ್ಮಿಸುವುದಾಗಿ ಭರವಸೆ ನೀಡಿದರು.

ಕ್ರಿಯೇಟಿವ್ ವೀರೇಶ್, ನಾಗು ಆರ್ಟ್ಸ್ ನಾಗರಾಜ್, ಡಾ.ಲೋಕೇಶ್ ಅಗಸನಕಟ್ಟೆ, ಡಾ.ಸಂಗೇನಹಳ್ಳಿ ಅಶೋಕ್‍ಕುಮಾರ್, ಮೃತ್ಯುಂಜಯಪ್ಪ, ಆರ್.ವೆಂಕಟೇಶರೆಡ್ಡಿ, ಸಿದ್ದಾಪುರ ಶಿವಕುಮಾರ್, ಟಿ.ತಿಮ್ಮಾರೆಡ್ಡಿ, ಡಿ.ಟಿ.ರಮೇಶ್ ಕಲಾಲೋಕ, ಓ.ಅಂಜಿನಪ್ಪ ಹೊಸರಂಗಾಪುರ, ಜಿ.ಆರ್.ಪಾಪಯ್ಯ, ಕೆ.ಪಿ.ಎಂ.ಗಣೇಶಯ್ಯ, ದಾದು, ಕೆ.ಜಿ.ಮಲ್ಲಿಕಾರ್ಜುನ್, ಬಿ.ಮಾರುತಿ, ಕಿರಣ್, ಕೆ.ರಾಘವೇಂದ್ರ ಕಲಾಲೋಕ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

Recent Posts

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…

1 hour ago

ಮಾರ್ಚ್ 01 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…

3 hours ago

ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…

3 hours ago

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…

3 hours ago

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

    ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 24 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago