Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಟ್ಟಡ ಕುಸಿದು ದಂಪತಿಗಳ ದುರ್ಮರಣ ಪ್ರಕರಣ :  ಮಾಜಿ ಸಚಿವ ಎಚ್.ಆಂಜನೇಯ ಭೇಟಿ

Facebook
Twitter
Telegram
WhatsApp

ಚಿತ್ರದುರ್ಗ. (ನ.20) : ಜಿಲ್ಲೆಯಲ್ಲಿ ಕಳೆದ ವಾರದಿಂದ ಎಡಬಿಡದೇ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿ ಕೇಂದ್ರದ ಎ.ಕೆ.ಕಾಲೋನಿಯಲ್ಲಿ ಪಾಳುಬಿದ್ದು ಶಿಥಿಲಾವಸ್ಥೆಯಲ್ಲಿದ್ದ ಶಿಶುವಿಹಾರದ ಗೋಡೆ ಕುಸಿದು ಮಲಗಿದ್ದ ದಂಪತಿಗಳಿಬ್ಬರು ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ್ದ ದುರ್ಘಟನೆ ನಡೆದ ಬೆನ್ನಿಗೆ ಶನಿವಾರ ಮಾಜಿ ಸಚಿವ ಎಚ್.ಆಂಜನೇಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ, ಆರ್ಥಿಕ ನೆರವಿನ ಸಹಾಯ ಹಸ್ತ ಚಾಚಿದರು.

ಮೃತ ದುರ್ದೈವಿಗಳು ಪರಿಶಿಷ್ಟ ಜಾತಿಗೆ ಸೇರಿದ ಕಡುಬಡತನದ ಕುಟಂಬದವರಾಗಿದ್ದು ಗುಡಿಸಿಲಿನಲ್ಲಿ ವಾಸ ಮಾಡುತ್ತಿದ್ದರು. ಗುಡಿಸಿಲಿನ ಪಕ್ಕದಲ್ಲಿಯೇ ಪಾಳುಬಿದ್ದು ಶಿಥಿಲಗೊಂಡಿದ್ದ ಶಿಶುವಿಹಾರ ಕಟ್ಟಡವಿದ್ದು, ಸತತ ಮಳೆಯ ಹೊಡೆತಕ್ಕೆ ಸಿಲುಕಿದ ಕಟ್ಟಡ ರಾತ್ರಿ ಮಲಗಿದ್ದವರ ಮೇಲೆ ಶುಕ್ರವಾರ ಬೆಳಗ್ಗೆ ಏಕಾಏಕಿ ಕವುಚಿ ಬಿದ್ದ ಪರಿಣಾಮ ದಂಪತಿಗಳು ಇಹಲೋಕ ತ್ಯಜಿಸಿದ್ದಾರೆ.

ಮೃತ ದುರ್ದೈವಿಗಳು ಕಂಪ್ಲೇಶಪ್ಪ (46) ತಿಪ್ಪಮ್ಮ(40) ಎಂದು ತಿಳಿದು ಬಂದಿದ್ದು, ಈ ದಂಪತಿಗಳು ಅಪೂರ್ವ(21) ಹಾಗೂ ಅರುಣ್(20) ವಯಸ್ಸಿನ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ತಂದೆ ತಾಯಿಗಳನ್ನ ಕಳೆದುಕೊಂಡ ಮಕ್ಕಳ, ಸಂಬಂಧಿಕರ ರೋದನ ಮುಗಿಲು ಮುಟ್ಟಿದ್ದು, ಮೃತರ ಮಕ್ಕಳ ಭವಿಷ್ಯಕ್ಕೆ ಸಾರ್ವಜನಿಕ ನೆರವನ್ನು ನಿರೀಕ್ಷಿಸಲಾಗುತ್ತಿದೆ.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಚ್.ಆಂಜನೇಯರು ಮಾತನಾಡಿ, ಇಂತಹ ದುರ್ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಶಿಶುವಿಹಾರ ಶಿಥಿಲ ಕಟ್ಟಡ ಕುಸಿದು ವಿನಾಕಾರಣ ಬಡಕುಟುಂಬದ ದಂಪತಿಗಳು ಸಾವನ್ನಪ್ಪಿರುವುದು ನಿಜಕ್ಕೂ ದುರ್ದೈವದ ಸಂಗತಿಯಾಗಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಅವರಿಗೆ ಅಗತ್ಯ ಸರ್ಕಾರ ಹಾಗೂ ವೈಯುಕ್ತಿಕ ನೆರವು ಕಲ್ಪಿಸುವ ಭರವಸೆ ನೀಡಲಾಗಿದೆಯೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯರಾದ ಆರ್.ನರಸಿಂಹರಾಜ್,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್‍ರೆಡ್ಡಿ, ಪಪಂ ಸದಸ್ಯರಾದ ಜೆ.ಆರ್.ರವಿಕುಮಾರ್, ಮಹಮ್ಮದ್ ಮನ್ಸೂರ್, ಟಿ.ಬಸಣ್ಣ, ಮುಖಂಡರಾದ ಜಿ.ಎಸ್.ಪ್ರಭುಸ್ವಾಮಿ, ಜಿ.ತಿಪ್ಪೇಸ್ವಾಮಿ, ಬಂಗಾರಪ್ಪ, ಬಂಡೆಕಪಿಲೆ ಓಬಣ್ಣ, ಬಿ.ಕಾಟಯ್ಯ, ಏಕಾಂತಪ್ಪ, ನರಸಿಂಹಮೂರ್ತಿ, ಆರ್.ಶ್ರೀಕಾಂತ್, ಬೋರನಾಯಕ, ಮುತ್ತಯ್ಯ, ಮಹಮ್ಮದ್ ವಾಸೀಂ, ಶಿವಣ್ಣ, ಟಿ.ಶಿವಕುಮಾರ್,  ಕೃಷ್ಣಮೂರ್ತಿ, ಜವಳಿ ಮಂಜು ಮತ್ತಿತರರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿರುವುದೇಕೆ ಗೊತ್ತಾ : ನಾಗಮಂಗಲದಲ್ಲಿ ಸತ್ಯ ಹೇಳಿದ ಚಾಲೆಂಜಿಂಗ್ ಸ್ಟಾರ್

ಮಂಡ್ಯ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಮೊದಲ ಹಂತದ ಚುನಾವಣೆಗೆ ಇನ್ನೆರಡು ದಿನ ಬಾಕಿ. ಎರಡನೇ ಹಳತದ ಚುನಾವಣೆಗೆ 13 ದಿನ ಬಾಕಿ ಇದೆ. ಹೀಗಿರುವಾಗ ಪಕ್ಷಗಳೆಲ್ಲಾ ಅಭ್ಯರ್ಥಿಗಳ ರವಾವಿ ಪ್ರಚಾರ

ಚಿತ್ರದುರ್ಗಕ್ಕೆ ಆಗಮಿಸಿದ ಪ್ರಿಯಾಂಕ ಗಾಂಧಿ :  ಹೆಲಿಕ್ಯಾಪ್ಟರ್ ತಪಾಸಣೆ ಮಾಡಿದ ಅಧಿಕಾರಿಗಳು

  ಚಿತ್ರದುರ್ಗ. ಏ.23: ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ  ಚಿತ್ರದುರ್ಗ ನಗರಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವರು ಪ್ರಯಾಣಿಸಿದ ಹೆಲಿಕ್ಯಾಪ್ಟರ್‍ ಅನ್ನು  ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ  ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್

ಚಿತ್ರದುರ್ಗದಲ್ಲಿ ಸಡಗರ ಸಂಭ್ರಮದಿಂದ ನಡೆದ ಶ್ರೀ ವೀರಭದ್ರ ದೇವರ ಗುಗ್ಗುಳ ಮತ್ತು ಅಗ್ನಿಕುಂಡ ಕಾರ್ಯಕ್ರಮ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 23 :  ನಗರದ ನೀಲಕಂಠೇಶ್ವರ ದೇವಾಲಯದ ಆವರಣದಲ್ಲಿನ ವೀರಶೈವ ಸಮಾಜದವತಿಯಿಂದ ಇಂದು ಹರಪನಹಳ್ಳಿಯ ಪಟ್ಟಣದ

error: Content is protected !!