ಬುರುಜನರೊಪ್ಪ ಗ್ರಾಮ ಪಂಚಾಯಿತಿ : ಅಧ್ಯಕ್ಷ- ಉಪಾಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ

1 Min Read

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 10 : ಹಿರಿಯೂರು ತಾಲ್ಲೂಕು ಬುರುಜನರೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಮ್ಮ ಜಿ. ಉಪಾಧ್ಯಕ್ಷೆ ಹೆಚ್.ಜ್ಯೋತಿ ಇವರುಗಳ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲಾಯಿತು.

ಬುರುಜನರೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ-ಉಪಾಧ್ಯಕ್ಷೆ ವಿರುದ್ದ ಅವಿಶ್ವಾಸ ನಿರ್ಣಯಕ್ಕಾಗಿ ನಿಗಧಿತ ನಮೂನೆ-1 ರಲ್ಲಿ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕಾರಣ ಇತ್ತೀಚೆಗೆ ಕರೆಯಲಾಗಿದ್ದ ಸಭೆಯಲ್ಲಿ ಒಟ್ಟು 19 ಸದಸ್ಯರ ಪೈಕಿ ಹದಿಮೂರು ಸದಸ್ಯರುಗಳು ಕೈ ಎತ್ತುವ ಮೂಲಕ ರಾಧಮ್ಮ ಹಾಗೂ ಹೆಚ್.ಜ್ಯೋತಿ ಇವರುಗಳ ವಿರುದ್ದ ಮತ ಚಲಾಯಿಸಿದ್ದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‍ರಾಜ್ ನಿಯಮಗಳು 1994 ರ 3(9) ರನ್ವಯ ಬರುಜನರೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ-ಮತ್ತು ಉಪಾಧ್ಯಕ್ಷರನ್ನು ಅಧಿಕಾರದಿಂದ ಕೆಳಗಿಳಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *