Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

1947 ರಿಂದ ಸರ್ಕಾರಿ ಬಸ್ ಕಾಣದ ಊರಿಗೆ ಬಸ್ ಸಂಚಾರ ಆರಂಭ :  ಸತ್ಯ ಸುಂದರಮ್

Facebook
Twitter
Telegram
WhatsApp

 

ಚಿತ್ರದುರ್ಗ, (ಜ.11): ಜಿಲ್ಲೆಯ ವಿವಿಧ ಗ್ರಾಮಗಳಿಗೆ ಹೊಸ ಬಸ್ ವ್ಯವಸ್ಥೆ ಸಂಚಾರ ಆರಂಭಿಸಬೇಕೆಂದು  ಬೇಡಿಕೆಗಳು ಬಂದಿದ್ದು, ವಿಶೇಷವಾಗಿ 1947 ರಿಂದ ಸರ್ಕಾರಿ ಬಸ್ ಕಾಣದ ಹಿರಿಯೂರು ತಾಲೂಕಿನ ಕೋಡಿಹಳ್ಳಿ ಮಾರ್ಗಕ್ಕೆ ಬಸ್ ಸಂಚಾರ ಆರಂಭಿಸಿದ್ದು ಗ್ರಾಮಸ್ಥರು ಹರ್ಷವ್ಯಕ್ತಪಡಿಸಿದ್ದಾರೆ  ಎಂದು ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ (ಡಿಸಿ)  ಕೆ.ಸತ್ಯ ಸುಂದರಮ್ ತಿಳಿಸಿದರು.

ಚಿತ್ರದುರ್ಗ ವಿಭಾಗೀಯ ಕಚೇರಿಯಲ್ಲಿ ಸಂಬಂಧ ಪಟ್ಟ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸಾರಿಗೆ ಸಚಿವರಾದ ಶ್ರೀರಾಮುಲು ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷರಾದ ಎಂ. ಚಂದ್ರಪ್ಪನವರ ಮಾರ್ಗದರ್ಶನದಲ್ಲಿ ಇಡೀ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ  ಹೊಸ ಹೊಸ ಯೋಜನೆಗಳನ್ನು ಅಳವಡಿಸಿಕೊಳ್ಳಲಿದ್ದೇವೆ ಎಂದು ಮಾಹಿತಿ ನೀಡಿದರು.

1947 ರಿಂದಲೂ  ಸರ್ಕಾರಿ ಬಸ್ ಕಾಣದ ಹಿರಿಯೂರು ತಾಲೂಕಿನ ಕೋಡಿಹಳ್ಳಿ ಮಾರ್ಗಕ್ಕೆ ಬಸ್ ಸಂಚಾರ ಆರಂಭಿಸಿದ್ದು ಗ್ರಾಮಸ್ಥರು ಹರ್ಷವ್ಯಕ್ತಪಡಿಸಿದ್ದು, ಆಲೂರು, ಕಸವನಹಳ್ಳಿ, ರಂಗಾಪುರ, ಆರನಕಟ್ಟೆ, ಕುಂದಲಗುರ, ಇಕ್ಕನೂರು, ಕೋಡಿಹಳ್ಳಿ, ಗೊಲ್ಲರಹಟ್ಟಿ, ಕೋಡಿಹಳ್ಳಿಗೆ ತಲುಪಲಿದ್ದು,. ಈ ಭಾಗ ಜನರಿಗೆ. ಮಹಿಳೆಯರಿಗೆ. ಹಿರಿಯರಿಗೆ, ವಿದ್ಯಾರ್ಥಿಗಳಿಗೆ ಇದು ಸಹಕಾರಿಯಾಗಲಿ ಎಂದರು.

ಜಿಲ್ಲೆಯಲ್ಲಿ ಎಲ್ಲಾ ತಾಲೂಕುಗಳಲ್ಲಿ ಡಿಪೋ ಆರಂಭಿಸಲಾಗುತ್ತಿದ್ದು ಎಲ್ಲರಿಗೂ ಅನುಕೂಲವಾಗಲಿದೆ. ಇಕ್ಕನೂರು ಪಂಚಾಯಿತಿ ಕೋಡಿಹಳ್ಳಿ ಸದಸ್ಯರಾದ ಮಹದೇವಮ್ಮ ಅವರು ಹೊಸ ಬಸ್‍ಗೆ ಚಾಲನೆ ನೀಡಿದರು. ವಿಭಾಗೀಯ ಸಂಚಾರ ಅಧಿಕಾರಿ ಚನ್ನಬಸಪ್ಪ, ಇಕ್ಕನೂರು ಪಂಚಾಯಿತಿ ಕೋಡಿಹಳ್ಳಿ ಸದಸ್ಯರಾದ ಮಹದೇವಮ್ಮ, ಇತರರು ಮತ್ತು ಗ್ರಾಮಸ್ಥರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!