Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೂನ್ 11ರಿಂದ ಬಸ್ ಪ್ರಯಾಣ ಫ್ರೀ : ರೂಲ್ಸ್ ಏನು ಗೊತ್ತಾ..?

Facebook
Twitter
Telegram
WhatsApp

 

ಬೆಂಗಳೂರು: ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿ ತಮ್ಮ ಗ್ಯಾರಂಟಿಗಳು ಯಾವಾಗಿಂದ ಜನರಿಗೆ ಸಿಗಲಿವೆ ಎಂಬುದನ್ನು ತಿಳಿಸಿದ್ದಾರೆ. ಅದರಲ್ಲಿ ನಾಲ್ಕನೇ ಗ್ಯಾರಂಟಿಯಾದ ಶಕ್ತಿ ಯೋಜನೆ ಬಗ್ಗೆ ಡಿಟೈಲ್ ನೀಡಿದ್ದಾರೆ.

ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಸದ್ಯಕ್ಕೆ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಬಸ್ ಫ್ರೀ ಮಾಡಲಾಗಿದೆ. ಯಾವೆಲ್ಲಾ ಬಸ್ ಗಳಲ್ಲಿ ಸಂಚಾರಕ್ಕೆ ನಿಷಿದ್ಧ, ಎಲ್ಲಿಯವರೆಗೂ ಸಂಚಾರ ಮಾಡಬಹುದು ಎಂಬುದನ್ನು ತಿಳಿಸಿದ್ದಾರೆ.

ಎಸಿ ಬಸ್, ರಾಜಹಂಸದಲ್ಲೂ ಫ್ರೀ ಆದರೆ ರಾಜ್ಯದ ಒಳಗಡೆ ಮಾತ್ರ ಮತ್ತು ಕರ್ನಾಟಕದವರಿಗೆ ಮಾತ್ರ. ಎಸಿ ಅಂಡ್ ನಾನ್ ಸ್ಲೀಪರ್ ಬಸ್ ಉಚಿತವಿಲ್ಲ. ರಾಜ್ಯದ ಮೂಲೆಯಲ್ಲಿ ಎಲ್ಲಿ ಬೇಕಾದರೂ ಸಂಚಾರ ಮಾಡಬಹುದು. ಆದರೆ ಗಡಿದಾಟಿದವರಿಗೆ ಉಚಿತ ಭಾಗ್ಯವಿರುವುದಿಲ್ಲ. ಈ ತಿಂಗಳ 11 ರಿಂದ ಫ್ರೀ ಬಸ್ ಪ್ರಯಾಣ ಮಾಡಬಹುದು.

ಎಸಿ ಮತ್ತು ಲಕ್ಸುರಿ ಬಸ್ ಹೊರತು ಪಡಿಸಿ ಮಾಡಿದರೆ 90% ಕವರ್ ಆಗುತ್ತೆ. ಆಫೀಸಿಂದ ಮನೆಗೆ ಮನೆಯಿಂದ ಆಫೀಸಿಗೆ ಹೋಗಬಹುದು. 50% ರಿಸರ್ವ್ ಮಾಡ್ತೇವೆ. ಒಂದು ವೇಳೆ ಹೆಣ್ಣು ಮಕ್ಕಳು ಬರದೆ ಹೋದಲ್ಲಿ ಗಂಡು ಮಕ್ಕಳಿಗೆ ಕೊಡ್ತೇವೆ. ಎಲ್ಲಾ ಬಸ್ ನಲ್ಲೂ 50-50 ಕೊಡ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!