Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಫಿಕ್ಸ್…! ಯಾವಾಗ ಗೊತ್ತಾ ?

Facebook
Twitter
Telegram
WhatsApp

 

ಬೆಂಗಳೂರು, ಅಕ್ಟೋಬರ್. 15 : ರಾಜ್ಯದಲ್ಲಿ ಮತ್ತೆ ಎಲೆಕ್ಷನ್ ಬಂದಿದೆ. ಅದು ಮೂರು ಕ್ಷೇತ್ರಗಳಿಗೆ ಮಾತ್ರ. ಶಾಸಕರು ಸಂಸದರಾದ ಮೇಲೆ ತೆರವಾಗಿದ್ದ ಮೂರು ಕ್ಷೇತ್ರಗಳಿಗೆ ಇದೀಗ ಉಪಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಇಂದು ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆಯ ದಿನಾಂಕವನ್ನು ಘೋಷಣೆ‌ ಮಾಡಿದೆ. ಈಗ ರಾಜಕೀಯ ಘಟಾನುಘಟಿಗಳ ಪ್ರತಿಷ್ಠೆ, ಸ್ಪರ್ಧೆ ಮತ್ತೆ ಮುನ್ನೆಲೆಗೆ ಬರಲಿದೆ.

ಹೆಚ್.ಡಿ.ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ, ಇ.ತುಕರಾಂ ಅವರಿಂದ ತೆರವಾಗಿದ್ದ ಚನ್ನಪಟ್ಟಣ, ಶಿಂಗ್ಗಾವಿ, ಸಂಡೂರಿಗೆ ಉಪಚುನಾವಣೆ ನಡೆಯಲಿದೆ. ನವೆಂಬರ್ 13ರಂದು ಉಪಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಮೂರು ಕ್ಷೇತ್ರಗಳಿಗೆ ಉಪಚುನಾವಣೆ ಅಂದೇ ನಡೆಯಲಿದ್ದು, ಇದೇ ತಿಂಗಳು ಅಂದ್ರೆ ಅಕ್ಟೋಬರ್ 25ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 28ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ‌‌ ಅಕ್ಟೋಬರ್ 30 ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ನವೆಂಬರ್ 13ರಂದು ಉಪಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶವೂ ಹೊರಬೀಳಲಿದೆ.

ಈ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಕ್ಷೇತ್ರ ಅಂದ್ರೆ ಅದು ಚನ್ನಪಟ್ಟಣ. ಈ ಕ್ಷೇತ್ರಕ್ಕೆ ಈಗಾಗಲೇ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಅದರಲ್ಲೂ ಬಿಜೆಪಿ ಜೆಡಿಎಸ್ ಸಮ್ಮಿಶ್ರದಲ್ಲಿ ಸಿಪಿ ಯೋಗೀಶ್ವರ್ ಟಿಕೆಟ್ ಗಾಗಿ ಕಾಯುತ್ತಿದ್ದಾರೆ. ಅತ್ತ ಕುಮಾರಸ್ವಾಮಿ ಯಾವುದನ್ನು ಬಾಯ್ಬಿಟ್ಟು ಹೇಳ್ತಿಲ್ಲ. ಚನ್ನಪಟ್ಟಣ ಕ್ಷೇತ್ರಕ್ಕೆ ಕುಮಾರಸ್ವಾಮಿ ಅವರ ನಿರ್ಧಾರವೇ ಫೈನಲ್ ಆಗಲಿದೆ. ಹೀಗಾಗಿ ಸಿಪಿ ಯೋಗೀಶ್ವರ್ ಕಾಯ್ತಾ ಇದಾರೆ. ಇನ್ನು ಡಿಕೆ ಬ್ರದರ್ಸ್ ಗೆ ಇದು ಪ್ರತಿಷ್ಠೆಯ ಕಣವಾಗಿದೆ. ಹೀಗಾಗಿ ಚನ್ನಪಟ್ಟಣ ಕ್ಷೇತ್ರದಲ್ಲಿ ಇನ್ಮುಂದೆ ಏನೆಲ್ಲಾ ಅಪ್ಡೇಟ್ ಆಗಲಿದೆ ಎಂಬ ಕುತೂಹಲವಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!