Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

3 ಕ್ಷೇತ್ರಗಳ ಬೈ ಎಲೆಕ್ಷನ್.. ಶಿಗ್ಗಾವಿ, ಸಂಡೂರಿಗೆ ಬಿಜೆಪಿ ಟಿಕೆಟ್ ಘೋಷಣೆ..!

---Advertisement---

ಬೆಂಗಳೂರು, ಅಕ್ಟೋಬರ್. 19 : ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಅನೌನ್ಸ್ ಆಗಿದೆ. ಇದು ಬಿಜೆಪಿ ಹಾಗೂ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಷ್ಠೆಯ ಕಣವಾಗಿದೆ. ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಪ್ರಯತ್ನದಲ್ಲಿದ್ರೆ, ಬಿಜೆಪಿ ಹಾಗೂ ಜೆಡಿಎಸ್ ಮೊದಲೇ ಗೆದ್ದಿದ್ದ ಚನ್ನಪಟ್ಟಣ, ಶಿಗ್ಗಾವಿಯನ್ನು ಬಿಡುವ ಮಾತೇ ಇಲ್ಲ ಎನ್ನುತ್ತಿದ್ದಾರೆ. ಇದರ ಜೊತೆಗೆ ಸಂಡೂರನ್ನು ಗೆಲ್ಲಲು ಪ್ಲ್ಯಾನ್ ರೂಪಿಸಿದ್ದು, ಜನಾರ್ದನ ರೆಡ್ಡಿ ಮುಂದೆ ನಿಂತಿದ್ದಾರೆ. ಇದರ ನಡುವೆ ಬಿಜೆಪಿ ಎರಡು ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ.

ಚನ್ನಪಟ್ಟಣ ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿದ್ದು, ಸಂಡೂರು ಹಾಗೂ ಶಿಗ್ಗಾವಿಗೆ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ‌. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರೇ ಗೆದ್ದಿದ್ದ ಕ್ಷೇತ್ರಕ್ಕೆ ಅವರ ಕುಟುಂಬದವರಿಗೇನೆ ಟಿಕೆಟ್ ನೀಡಲಾಗಿದೆ. ಶಿಗ್ಗಾವಿ ಕ್ಷೇತ್ರಕ್ಕೆ ಬಸವರಾಜ್ ಬೊಮ್ಮಾಯಿ ಅವರ ಮಗ ಭರತ್ ಅವರನ್ನು ಕಣಕ್ಕೆ ಇಳಿಸಲಾಗುತ್ತಿದೆ. ಟಿಕೆಟ್ ಅನ್ನು ಅವರ ಮಗನಿಗೆ ಘೋಷಣೆ ಮಾಡಿದ್ದಾರೆ.

ಸಂಡೂರನ್ನು ಬಿಜೆಪಿ ತೆಕ್ಕೆಗೆ ಪಡೆಯಲೇಬೇಕೆಂದು ಜನಾರ್ದನ ರೆಡ್ಡಿ ಹೋರಾಟ ಶುರು ಮಾಡಿದ್ದಾರೆ. ಹೀಗಾಗಿಯೇ ಸಂಡೂರು ಕ್ಷೇತ್ರದ ಟಿಕೆಟ್ ಅನ್ನು ಜನಾರ್ದನ ರೆಡ್ಡಿ ಆಪ್ತರಾದ ಬಂಗಾರು ಹನುಮಂತುಗೆ ನೀಡಲಾಗಿದೆ. ಇನ್ನುಳಿದಿರುವುದು ಚನ್ನಪಟ್ಟಣ ಕ್ಷೇತ್ರ. ಕಾಂಗ್ರೆಸ್ ನಿಂದ ಡಿಕೆ ಸುರೇಶ್ ಅವರನ್ನು ಕಣಕ್ಕೆ ಇಳಿಸಲಿದ್ದಾರೆ ಎಂಬ ಮಾತಿದೆ. ಹೀಗಾಗಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಸಾಧ್ಯತೆ ಇದೆ. ಆದರೆ ಚನ್ನಪಟ್ಟಣ ಕ್ಷೇತ್ರದಿಂದ ಸಿಪಿ ಯೋಗೀಶ್ವರ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹೀಗಾಗಿ ಸಿಪಿ ಯೋಗೀಶ್ವರ್ ಅವರ ಮನವೊಲಿಸಿ, ಆ ಬಳಿಕ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment