Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಇಸ್ಕಾನ್ ವತಿಯಿಂದ ಎರಡು ದಿನಗಳ ಕಾಲ ಅದ್ದೂರಿಯಾಗಿ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್ 07 : ಅಂತರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ ಇವರ ವತಿಯಿಂದ ನಗರದ ಶ್ರೀಮತಿ ಕಾಟಮ್ಮ ಪಟೇಲ್‌ ವೀರನಾಗಪ್ಪ ಸಮುದಾಯ ಭವನದಲ್ಲಿ  (ಉಮಾಪತಿ ಕಲ್ಯಾಣ ಮಂಟಪ)

2 ದಿನಗಳ ಕಾಲ ಶ್ರೀಕೃಷ್ಣ ಜನ್ಮಾಷ್ಮಮಿ ಸಂಭ್ರಮ ನಡೆಯಲಿದೆ.

ಸೆಪ್ಟೆಂಬರ್ 7 ರ ಕಾರ್ಯಕ್ರಮಗಳು:

ಚಿತ್ರದುರ್ಗದ ಶಾಸಕರಾದ ಕೆ.ಸಿ ವೀರೇಂದ್ರ ಪಪ್ಪಿಯವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾಧಿಕಾರಿ ಶ್ರೀಮತಿ ದಿವ್ಯ ಪ್ರಭು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರ ಸ್ವಾಮಿ, ಮುಖ್ಯ ಪೋಷಕ ಅತಿಥಿಗಳಾಗಿ ಎ.ವಿ.ಉಮಾಪತಿ ಮತ್ತು ಶ್ರೀಮತಿ ಆರ್. ಯಶೋಧಾದೇವಿ ಉಮಾಪತಿಯವರು ಭಾಗವಹಿಸುವರು.

ನಂತರ ಶ್ರೀ ಕೃಷ್ಣ ವೇಷಭೂಷಣ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಮಹಾಭಿಷೇಕ,  ಮಹಾಮಂಗಳಾರತಿ, ಕಾರ್ಯಕ್ರಮಗಳು ನೆರವೇರಲಿವೆ.
ಅಭಿಷೇಕ ಸೇವೆ, ರಾಜಭೋಗ ಸೇವೆ,
ಪುಷ್ಪಾಲಂಕಾರ ಸೇವೆ, ಜನ್ಮಾಷ್ಟಮಿ ಸೇವೆ,
ತೊಟ್ಟಿಲು ಸೇವಾ, ತುಳಸಿ, ಆರ್ಚನ ಹಾಗೂ ಇತರ ಸೇವೆಗಳು ಸಂಜೆ 5.00 ರಿಂದ ರಾತ್ರಿ 12:00ರವರೆಗೆ ನಡೆಯುತ್ತವೆ. ಧಾನ್ಯ, ಹಾಲು, ತುಪ್ಪ, ಹಣ್ಣು, ಹೂವು ಇತ್ಯಾದಿಗಳ ರೂಪದಲ್ಲಿಯೂ ಸಹ ಭಕ್ತಾದಿಗಳು ಸೇವೆ ಸಲ್ಲಿಸಬಹುದು.

ಸೆಪ್ಟೆಂಬರ್ 8 ರ ಕಾರ್ಯಕ್ರಮಗಳು:
ನಂದೋತ್ಸವ ಮತ್ತು ಶೀಲ ಪ್ರಭುಪಾದರ ಅವಿರ್ಭಾವ ಮಹೋತ್ಸವ ಬೆಳಿಗ್ಗೆ 10 ರಿಂದ   ಮಧ್ಯಾಹ್ನ 1 ಗಂಟೆಯವರೆಗೂ ನಡೆಯಲಿದೆ.

ಇಂದು ಮತ್ತು ನಾಳೆ ವಿವಿಧ ಪೂಜೆಗಳು ನಡೆಯಲಿದ್ದು ವಿಶೇಷ ಅಹಂಕಾರದಿಂದ ಕಂಗೊಳಿಸುವ ಶ್ರೀ ಕೃಷ್ಣನನ್ನು ಕಣ್ತುಂಬಿಕೊಳ್ಳಬಹುದು. ನೀವು ಮತ್ತು ನಿಮ್ಮ ಕುಟುಂಬದವರು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯಲ್ಲಿ ಭಾಗವಹಿಸಿ. ಶ್ರೀಕೃಷ್ಣನ ಆಶೀರ್ವಾದ ಪಡೆಯಿರಿ ಎಂದು ಚಿತ್ರದುರ್ಗದ ಇಸ್ಕಾನ್ ಸಮಿತಿ ಯವರು ಆಹ್ವಾನಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment