Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎರಡು ಕ್ಷೇತ್ರದಲ್ಲಿ ನಿಲ್ಲುವಂತೆ ಮಾಡಿ, ಸೋಮಣ್ಣರನ್ನು ಬಲಿಪಶು ಮಾಡಿದೆ : ಸೋಮಣ್ಣ ಪರ ನಿಂತ ಸಚಿವ ಎಂಬಿ ಪಾಟೀಲ್

Facebook
Twitter
Telegram
WhatsApp

ವಿಜಯಪುರ: ವಿ ಸೋಮಣ್ಣ ಸದ್ಯ ಬಿಜೆಪಿ ಪಕ್ಷದಲ್ಲಿ ಮುನಿಸಿಕೊಂಡಿದ್ದಾರೆ. ಇನ್ನು ಸ್ವಲ್ಪದರಲ್ಲಿಯೇ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಈ ಬೆನ್ನಲ್ಲೇ ಸಚಿವ ಎಂ ಬಿ ಪಾಟೀಲ್, ವಿ ಸೋಮಣ್ಣ ಪರ ಮಾತನಾಡಿದ್ದಾರೆ. ಸೋಮಣ್ಣ ಅವರನ್ನು ಎರಡೆರಡು ಕ್ಷೇತ್ರಗಳಲ್ಲಿ ನಿಲ್ಲಿಸಿ ಬಲಿ ಪಶು ಮಾಡಿದ್ದಾರೆ ಎಂದಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಹಿರಿಯ ನಾಯಕ ವಿ ಸೋಮಣ್ಣ ಅಸಮಾಧಾನಗೊಂಡಿರುವುದು ಸ್ವಾಭಾವಿಕ. ಎರಡು ಕಡೆಗಳಲ್ಲೂ ಅವರು ಹೀನಾಯವಾಗಿ ಸೋಲು ಕಂಡರು. ಗೋವಿಂದರಾಜ ನಗರದಲ್ಲಿ ಅವರು ಸ್ಪರ್ಧಿಸಿದ್ದರೆ ಗೆಲ್ಲುತ್ತಿರಲಿಲ್ಲ. ಆದರೆ ಸೋಲು ಅಷ್ಟು ಹೀನಾಯವಾಗುತ್ತಿರಲಿಲ್ಲ. ಸೋಮಣ್ಣ ಅವರು ಕಾಂಗ್ರೆಸ್ ಸೇರುವುದಕ್ಕೆ ಬಯಸಿದರೆ, ಸೇರಿಸಿಕೊಳ್ಳುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದಿದ್ದಾರೆ.

 

ನನ್ನೊಂದಿಗೆ, ಕೆಪಿಸಿಸಿ ಅಧ್ಯಕ್ಷರೊಂದಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಹಲವರು ಸಂಪರ್ಕದಲ್ಲಿದ್ದಾರೆ. ಲೋಕಸಭಾ ಚುನಾವಣೆಯ ಮೊದಲು ಅಥವಾ ಬಳಿಕ ರಾಜ್ಯ ರಾಜಕಾರಣದಲ್ಲಿ ಜೋರು ಬದಲಾವಣೆ ನಡೆಯಲಿದೆ. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿದ ಬಳಿಕ ನನ್ನ ಅಧಿಕೃತ ನಿಲುವು ಸ್ಪಷ್ಟಪಡಿಸುತ್ತೇನೆ.ಇನ್ನುಳಿದಂತೆ ಜಾತಿಗಣತಿ ವರದಿ ಮಂಡನೆಯಿಂದ ಜಾತಿ‌ಗಳ ನಡುವೆ ಸಂಘರ್ಷ ವಿಚಾರ ‘ಅದು ಏನೇ ಇದ್ದರೂ ಪಕ್ಷ ಹಾಗೂ ಸರ್ಕಾರದ ಚೌಕಟ್ಟಿನಲ್ಲಿ ಮಾತನಾಡುತ್ತೇವೆ ಎಂದು ಜಾತಿಗಣತಿ ವಿಚಾರದ ಬಗ್ಗೆ ಮಾತನಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

ಬೆಳಗಾವಿಯಲ್ಲಿ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ ವಿಮಾನಕ್ಕೆ ನಿರಾಕರಣೆ..!

ಬೆಳಗಾವಿ: ರಾಜ್ಯದ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಳಗಾವಿಯಲ್ಲಿದ್ದು, ಬಳಿಕ ಅಲ್ಲಿಂದ ಶಿರಸಿಗೆ ತೆರಳಲಿದ್ದಾರೆ. ಈಗಾಗಲೇ ಬೆಳಗಾವಿಯಲ್ಲಿ ಜನರನ್ನುದ್ದೇಶಿಸಿ

ದಾವಣಗೆರೆ, ಶಿರಸಿಯಲ್ಲಿ ಮೋದಿ ಮತಬೇಟೆ : ಬೆಳಗಾವಿಯಿಂದ ಆರಂಭ

ಬೆಳಗಾವಿ: ಈಗಾಗಲೇ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಜನತೆ ರೆಡಿಯಾಗಿದ್ದಾರೆ. ಈಗಾಗಲೇ ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯೂ ರಾಜ್ಯ

error: Content is protected !!