ಬಿ.ವೈ.ವಿಜಯೇಂದ್ರ ಕ್ಷೇತ್ರ ಬದಲಾವಣೆ? 

1 Min Read

ಮೊದಲ ಚುನಾವಣೆಯಲ್ಲಿಯೇ ಶಿಕಾರಿಪುರದಲ್ಲಿ ಗೆದ್ದು ಶಾಸಕರಾಗಿರುವ ವಿಜಯೇಂದ್ರ ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದಾರೆಯೇ? ಈ ಸುದ್ದಿ ರಾಜಕೀಯದಲ್ಲಿ ಹೊಸ ಅಲೆ ಎಬ್ಬಿಸುತ್ತಿದೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದಾಗ ತಾವು ಪ್ರತಿನಿಧಿಸುತ್ತಿದ್ದ ಶಿಕಾರಿಪುರ ಕ್ಷೇತ್ರಕ್ಕೆ ಬಿ.ವೈ.ವಿಜಯೇಂದ್ರ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದರು. ನಂತರ ವಿಜಯೇಂದ್ರ ಗೆದ್ದರು.ಈಗ ಬಿ.ವೈ.ವಿಜಯೇಂದ್ರ ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ವರುಣಾದಲ್ಲಿ ವಿಜಯೇಂದ್ರ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಬಹಳ ಹಿಂದೆ ಕೇಳಿ ಬಂದಿದ್ದವು. ಆದರೆ ಬಿಜೆಪಿ ಹೈಕಮಾಂಡ್ ನಾಯಕರು ಅದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಆದರೆ ಈಗ ಚುನಾವಣೆಗೆ ಎರಡೂವರೆ ವರ್ಷ ಇರುವಾಗ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ನಡೆಯುತ್ತಿದೆ.ಶಿಕಾರಿಪುರ ಬದಲು ಬೆಂಗಳೂರು ನಗರದ ಕ್ಷೇತ್ರ ಅಥವಾ ತುಮಕೂರಿನಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

Share This Article
Enable Notifications OK No thanks