Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಮಧ್ಯಂತರ ಚುನಾವಣೆಯ ಭವಿಷ್ಯ ನುಡಿದ ಬಿ.ವೈ ವಿಜಯೇಂದ್ರ!

---Advertisement---

ಸುದ್ದಿಒನ್,ಬೆಂಗಳೂರು,ಮೇ.27: ರಾಜ್ಯ ರಾಜಕೀಯದಲ್ಲಿ ಸದ್ಯ ಭಾರಿ ಬಿರುಗಾಳಿ ಎದ್ದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪರ್ವ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ ಎನ್ನಲಾಗುತ್ತಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಡೆಸಿದ ಸರಣಿ ಸಭೆಗಳ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆಗಳು ಮುಂಚೂಣಿಗೆ ಬಂದಿವೆ.

ಮೂಲಗಳ ಪ್ರಕಾರ, ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಅಥವಾ ಗುರುವಾರ (ಮೇ 28) ತಮ್ಮ ಸ್ಥಾನಕ್ಕೆ ಗುಡ್ ಬೈ ಹೇಳುವ ಸಾಧ್ಯತೆ ದಟ್ಟವಾಗಿದೆ. ಪಕ್ಷದ ಹಿರಿಯ ನಾಯಕತ್ವವು ಸಿದ್ದರಾಮಯ್ಯ ಅವರನ್ನು ದೆಹಲಿ ರಾಜಕಾರಣಕ್ಕೆ ಕರೆದೊಯ್ದು, ರಾಜ್ಯಸಭಾ ಸ್ಥಾನ ನೀಡಲು ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈಗಾಗಲೇ ತಮ್ಮ ಆಪ್ತ ವಲಯ ಹಾಗೂ ಸಚಿವರೊಂದಿಗೆ ಸಮಾಲೋಚನೆ ನಡೆಸಿರುವ ಸಿದ್ದರಾಮಯ್ಯ, ಹೈಕಮಾಂಡ್ ಸೂಚನೆಗೆ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಗ್ಯಾರಂಟಿ: ಬಿ.ವೈ. ವಿಜಯೇಂದ್ರ ಭವಿಷ್ಯ!

ಇತ್ತ ರಾಜ್ಯ ಕಾಂಗ್ರೆಸ್ ಸರ್ಕಾರದ ಆಂತರಿಕ ಕಚ್ಚಾಟ ಹಾಗೂ ಆಡಳಿತ ವೈಫಲ್ಯದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಒಳಜಗಳ ಮತ್ತು ಗೊಂದಲಗಳಿಂದಾಗಿ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ನಿರ್ಮಾಣವಾಗಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಕರ್ನಾಟಕದಲ್ಲಿ ಶೀಘ್ರದಲ್ಲೇ ಮಧ್ಯಂತರ ಚುನಾವಣೆ ಎದುರಾಗುವುದನ್ನು ತಳ್ಳಿಹಾಕುವಂತಿಲ್ಲ,” ಎಂದು ವಿಜಯೇಂದ್ರ ಎಚ್ಚರಿಸಿದ್ದಾರೆ.

ಕಾಂಗ್ರೆಸ್ ವರಿಷ್ಠರು ಇದು ಕೇವಲ ಮುಂಬರುವ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಸಿದ್ಧತೆಯಷ್ಟೇ ಎಂದು ಮೇಲ್ನೋಟಕ್ಕೆ ಹೇಳುತ್ತಿದ್ದಾರೆ. ಆದರೆ, ತೆರೆಮರೆಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕಸರತ್ತು ಬಿರುಸಿನಿಂದ ಸಾಗಿದೆ. ಸಿದ್ದರಾಮಯ್ಯ ಅವರಂತಹ ಪ್ರಭಾವಿ ಹಿಂದುಳಿದ ವರ್ಗಗಳ (OBC) ಕಡುವರಿಷ್ಠ ನಾಯಕರನ್ನು ಬದಲಾಯಿಸುವಾಗ, ಲೋಕಸಭೆ ಚುನಾವಣೆ ನಂತರದ ರಾಜಕೀಯ ಲಾಭ-ನಷ್ಟಗಳ ಲೆಕ್ಕಾಚಾರವನ್ನು ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದೆ.

Join WhatsApp

Join Now

Join Telegram

Join Now