Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉಪಚುನಾವಣೆ ಫಲಿತಾಂಶದ ಬಳಿಕ ಸಂಪುಟ ವಿಸ್ತರಣೆ : ಡಿಕೆ ಶಿವಕುಮಾರ್ ಹೇಳಿದ್ದೇನು..?

ಡಿಕೆ ಶಿವಕುಮಾರ್
---Advertisement---

ಮುರುಡೇಶ್ವರ: ರಾಜ್ಯದ ಉಪಚುನಾವಣೆ, ಮಹಾರಾಷ್ಟ್ರ ಎಲೆಕ್ಷನ್ ಮುಗಿಸಿಕೊಂಡು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಪತ್ನಿ ಜೊತೆಗೆ ಬಿಜಚ್ ಕಡೆಗೆ ಹೋಗಿದ್ದಾರೆ. ಮುರುಡೇಶ್ವರ ಬೀಚಗ ಸದ್ದಿನಲ್ಲಿ ಕೂತು ಕೊಂಚ ರಿಲ್ಯಾಕ್ಸ್ ಆಗಿದ್ದಾರೆ. ಇದೇ ವೇಳೆ ಸಂಪುಟ ವಿಸ್ತರಣೆಯ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ನಾಳೆ ಉಪಚುನಾವಣೆಯ ಫಲಿತಾಂಶ ಹೊರಬರಲಿದೆ. ಫಲಿತಾಂಶ ಬಂದ ಮೇಲೆ ಸಂಪುಟ ವಿಸ್ತರಣೆಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದೇ ಪ್ರಶ್ನೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಎದುರಾಗಿತ್ತು.

ಈ ಬಗ್ಗೆ ಮುರುಡೇಶ್ವರದಲ್ಲಿ ಮಾತನಾಡಿದ ಅವರು, ಸಂಪುಟದ ಬಗ್ಗೆ ಊಹಾಪೋಹಗಳು ಕೇಳಿ ಬರುತ್ತಲೇ ಇರುತ್ತವೆ. ನಾನು ಮುಖ್ಯಮಂತ್ರಿ ಅಲ್ಲ. ಸಿದ್ದರಾಮಯ್ಯ ಅವರು ನಮ್ಮ ಮುಖ್ಯಮಂತ್ರಿ. ಅವರು ಇದಕ್ಕೆಲ್ಲ ಉತ್ತರ ಹೇಳುತ್ತಾರೆ ಎಂದಿದ್ದಾರೆ.

ಇದೇ ವೇಳೆ ಎಕ್ಸಿಟ್ ಪೋಲ್ ಬಗ್ಗೆ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಕೇವಲ ಹದಿನಾರು ಸಾವಿರ ಮತಗಳು ಮಾತ್ರ ದೊರೆತಿದ್ದವು. ಆದರೆ ಈ ಬಾರಿ ಗೆದ್ದೇ ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸ ನನ್ನಲ್ಲಿದೆ. ರಾಮನಗರದಲ್ಲಿ ಇಕ್ಬಾಲ್ ಹುಸೇನ್, ಮಾಗಡಿಯಲ್ಲಿ ಬಾಲಕೃಷ್ಣ, ಕನಕಪುರದಲ್ಲಿ ನಾನು ಗೆದ್ದಿದ್ದೆ. ಚನ್ನಪಟ್ಟಣದಲ್ಲಿ ಮಾತ್ರ ಗೆದ್ದಿರಲಿಲ್ಲ. ಹೀಗಾಗಿ ಈ ಬಾರಿಯ ಗೆಲುವು ನಮ್ಮದೆ ಎಂದು ಹೇಳಿದ್ದಾರೆ.

ಹಾಗೇ ಚುನಾವಣೆಯ ಎಕ್ಸಿಟ್ ಪೋಲ್ ಬಗ್ಗೆ ಮಾತನಾಡಿ, ನಿಮ್ಮ ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲ ತಲೆಕೆಳಗಾಗುತ್ತವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ. ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸರಳ ಬಹುಮತ ಪಡೆದು ಸರ್ಕಾರ ಸಂಘಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...