ಮೈಸೂರು.ಜುಲೈ.28 : ಇಂದು ರಾತ್ರಿಯೇ ಸಚಿವರ ಪಟ್ಟಿ ಫೈನಲ್ ಆಗಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಸಚಿವರ ಆಖೈರು ಪಟ್ಟಿ ಇಂದು ರಾತ್ರಿಯೇ ಅಂತಿಮಗೊಳ್ಳುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.
ಇಂದು ರಾತ್ರಿ 8 ಗಂಟೆಗೆ ಪ್ರಮುಖ ನಾಯಕರ ಜೊತೆ ಸಭೆ ನಿಗದಿಯಾಗಿದೆ. ಈ ಸಭೆಯಲ್ಲಿ ಸಚಿವ ಸಂಪುಟ ಸೇರ್ಪಡೆಯಾಗಲಿರುವ ಅಭ್ಯರ್ಥಿಗಳ ಕುರಿತು ಚರ್ಚೆ ನಡೆಯಲಿದ್ದು, ಇಂದೇ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.










