Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಭಾರತ ರತ್ನ ಕರ್ಪೂರಿ ಠಾಕೂರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.05 :  ಅಲಕ್ಷಿತ ಶೋಷಿತ ಸಮುದಾಯಗಳ ಪರವಾಗಿ ಕಳೆದ ದಶಕದಿಂದಲೂ ಕಾರ್ಯನಿರ್ವಹಿಸುತ್ತಾ ಬರುತ್ತಿರುವ ಕರ್ನಾಟಕ ರಾಜ್ಯ ಅಲಕ್ಷಿತ ಸಮುದಾಯಗಳ ಮಹಾವೇದಿಕೆ (ರಿ)ಯಿಂದ ಪ್ರತಿವರ್ಷದಂತೆ ಈ ವರ್ಷವೂ 2024-25ನೇ ಸಾಲಿಗೆ ನೀಡಲಾಗುತ್ತಿರುವ ‘ಭಾರತ ರತ್ನ ಕರ್ಪೂರಿ ಠಾಕೂರ್ ಪ್ರಶಸ್ತಿ’ ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹಿಂದುಳಿದ ಅಲಕ್ಷಿತ ತಳ ಸಮುದಾಯಗಳಿಗೆ ಸೇರಿದ ಸಣ್ಣ ಮತ್ತು ಅತೀ ಸಣ್ಣ ಜಾತಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ, ಆರ್ಥಿಕ ಚೈತನ್ಯಕ್ಕೆ, ಶೈಕ್ಷಣಿಕ ಪ್ರಗತಿಗೆ ಕಂಕಣಬದ್ಧರಾಗಿರುವಂತಹ,  ತಳಸಮುದಾಯಗಳ ಪರವಾಗಿ ಧ್ವನಿ ಎತ್ತುವಂತಹ ಮಹಾನ್ ವ್ಯಕ್ತಿಗಳಿಗೆ ಅಥವ ಸಂಸ್ಥೆಗಳಿಗೆ ‘ ಭಾರತ ರತ್ನ ಕರ್ಪೂರಿ ಠಾಕೂರ್’ ಪ್ರಶಸ್ತಿಯನ್ನು ಸಮರ್ಪಿಸಲಾಗುತ್ತಿದೆ.

ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಗಳು ಹಾಗೂ ಸಂಘ ಸಂಸ್ಥೆಗಳು ಅರ್ಜಿಯನ್ನು ಸಲ್ಲಿಸಬಹುದು.  ‘ಭಾರತ ರತ್ನ ಕರ್ಪೂರಿ ಠಾಕೂರ್ ಪ್ರಶಸ್ತಿ’ ಯು 25,000 ರೂ.ಗಳ ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.

ಆಸಕ್ತಿ ಹೊಂದಿರುವ ವ್ಯಕ್ತಿಗಳು, ಸಂಘ ಸಂಸ್ಥೆಗಳು ತಾವು ಮಾಡಿರುವ ಸೇವೆಗಳ ಕುರಿತು  ಅಗತ್ಯ ಛಾಯಚಿತ್ರಗಳೊಳಗೊಂಡಂತೆ ವಿವರವಾದ ವರದಿ, ಸ್ವ ವಿವರಗಳೊಂದಿಗೆ ಅಗತ್ಯ ದಾಖಲೆಗಳೊಂದಿಗೆ ದಿ.15-02-2024ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಳಾಸ; ಟಿ.ತಿಪ್ಪೇಸ್ವಾಮಿ ಸಂಪಿಗೆ, ಅಧ್ಯಕ್ಷರು, ಕರ್ನಾಟಕ ರಾಜ್ಯ ಅಲಕ್ಷಿತ ಸಮುದಾಯಗಳ ಮಹಾವೇದಿಕೆ (ರಿ), ಕನ್ನಡ ಸಂಪಿಗೆ ಭವನ, ಪ್ರಸಾದ್ ಆಸ್ಪತ್ರೆ ರಸ್ತೆ, ವೇಮನ ನಗರ, ಚಿತ್ರದುರ್ಗ-5775501.  ಮೊ; 9731338670

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment