ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕಳೆದ ಡಿಸೆಂಬರ್ ನಲ್ಲಿ 384 ಪ್ರೊಬೆಷನರಿ ಹುದ್ದೆಗಳ ನೇಮಕಾತಿಗಾಗಿ ಪರೀಕ್ಚೆ ನಡೆದಿತ್ತು. ಆದರೆ ಈ ಪರೀಕ್ಷೆಯಲ್ಲಿ ಕನ್ನಡದ ಕಗ್ಗೊಲೆ ಮಾಡಿದ್ದಾರೆ ಎಂದು ಪರೀಕ್ಷಾರ್ಥಿಗಳೇ ಆರೋಪ ಮಾಡಿದ್ದರು. ಕೆಎಎಸ್ ಭಾಷಾಂತರದಲ್ಲಿ 79 ಪ್ರಶ್ನೆಗಳು ತಪ್ಪಾಗಿದ್ದವು ಎಂದು ಆರೋಪ ಕೇಳಿ ಬಂದಿದೆ. ಇದರಿಂದ ಸಾವಿರಾರು ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಈ ಕಾತಣಕ್ಕೆ ಮರು ಪರೀಕ್ಷೆಗೆ ಕರವೇ ಒತ್ತಾಯಿಸುತ್ತಿದೆ.
ಈ ಸಂಬಂಧ ಪ್ರತಿಭಟನೆಗೆ ಕರೆ ನೀಡಿದೆ. ಕೆಪಿಎಸ್ಸಿ ಆಯೋಗದ ವಿರುದ್ಧ ತಿರುಗಿ ಬಿದ್ದಿರುವ ಕರವೇ, ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದು, ನಾಳೆ ರಾಜ್ಯದ ಮೂಲೆ ಮೂಲೆಯಿಂದಾನೂ ವಿದ್ಯಾರ್ಥಿಗಳು ಬರಲಿದ್ದಾರೆ. ಕರವೇ ನಾರಾಯಣಗೌಡ ನೇತೃತ್ವದಲ್ಲಿ ನಾಳೆ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಲಿದೆ.
ಕನ್ನಡದ ಕಗ್ಗೋಲೆ ಮಾಡಿ ಕೆಪಿಎಸ್ಸಿ ಪ್ರಶ್ನೆ ಪತ್ರಿಕೆಯನ್ನು ತಯಾರು ಮಾಡಿದೆ. ಕೂಡಲೇ ಮರುಪರೀಕ್ಷೆ ಮಾಡಬೇಕೆಂದು ಆಗ್ರಹಿಸಿ ನಾಳೆ, ಸಾವಿರಾರು ವಿದ್ಯಾರ್ಥಿಗಳು, ಸಾಹಿತಿಗಳು ಪ್ರತಿಭಟನೆ ನಡೆಸಲಿದ್ದಾರೆ. ಈ ಸಂಬಂಧ ಈಗಾಗಲೇ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಹೀಗಾಗಿ ಮರುಪರೀಕ್ಷೆ ನಡೆಸಬೇಕೆಂದು ರಾಜ್ಯಪಾಲರ ಬಳಿ ಮನವಿ ಮಾಡಿಕೊಳ್ಳಲಾಗಿದೆ. ರಾಜ್ಯಪಾಲರಿಗೆ ಕರವೇ ದೂರು ನೀಡುವಾಗ ಅವರ ಜೊತೆಗೆ ಅಖಿಲ ಕರ್ನಾಟಕ ವಿದ್ಯಾರ್ಥಿ ಮತ್ತು ಸಂಶೋಧಕರ ಸಂಘ ಕೂಡ ಹಾಜರಿತ್ತು. ಎಲ್ಲರೂ ಸೇರಿ ರಾಜ್ಯಪಾಲರಿಗೆ ಮರುಪರೀಕ್ಷೆ ನಡೆಸಬೇಕೆಂದು ಮನವಿ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಭರವಸೆ ನೀಡಿದ್ದು, ಈ ವಿಚಾರವನ್ನು ರಾಜ್ಯ ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್