Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಂಚಾರಿ ನಿಯಮ ಪಾಲಿಸದವರ ಲೈಸೆನ್ಸ್ ರದ್ದು ಮಾಡಿ: ಸಾರಿಗೆ ಸಚಿವರಿಗೆ ಸಿಎಂ ಸೂಚನೆ

---Advertisement---

ಬೆಂಗಳೂರು ಸೆ 23: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು.

ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ: ನೂತನ 65 ಆ್ಯಂಬುಲನ್ಸ್ ಗಳನ್ಮು ಲೋಕಾರ್ಪಣೆ” ಮಾಡಿದರು.

ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ‌ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆ್ಯಂಬುಲೆನ್ಸ್ ಗಳು ನೆರವಾಗುತ್ತವೆ ಎಂದರು.

ಸದ್ಯ 65 ಆಧನಿಕ ಮತ್ತು ಪ್ರಾಥಮಿಕ ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ‌ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ‌ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ವಿಸ್ತರಿಸಲಾಗುವುದು ಎಂದರು.

ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಸಿಎಂ ಕರೆ ನೀಡಿದರು.

ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು.

ಸಂಚಾರಿ ನಿಯಮ ಪಾಲಿಸದವರ ಲೈಸೆನ್ಸ್ ರದ್ದು : ಸಂಚಾರಿ ನಿಯಮ‌ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸಾರಿಗೆ ಸಚಿವರಿಗೆ ಸೂಚನೆ ಈಡಿದರು.

ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಂ.ರೇವಣ್ಣ ಸೇರಿ ಹಲವು ಮುಖಂಡರು ಮತ್ತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...