Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಠ್ಯ ಮರು ಪರಿಷ್ಕರಣ ಸಮಿತಿಯನ್ನು ಕೂಡಲೇ ರದ್ದುಪಡಿಸಿ : ನಾರಾಯಣಗೌಡ ಬಣದ ಕರವೇ ಪ್ರತಿಭಟನೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.31) :  ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಮರು ಪರಿಷ್ಕರಣ ಸಮಿತಿಯನ್ನು ಸರ್ಕಾರ ಕೂಡಲೇ ರದ್ದುಪಡಿಸಿ ಹಿಂದಿನ ವರ್ಷದ ಪಠ್ಯವನ್ನೇ ಮಕ್ಕಳಿಗೆ ವಿತರಣೆ ಮಾಡುವಂತೆ ಆಗ್ರಹಿಸಿ ನಾರಾಯಣಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆಯನ್ನು ನಡೆಸಿತು.

ರಾಜ್ಯ ಸರ್ಕಾರವು ಪ್ರೊ.ಬರಗೂರು ರಾಮಚಂದ್ರಪ್ಪರವರ ನೇತೃತ್ವದ ಪಠ್ಯ ಪರಿಷ್ಕರಣ ಸಮಿತಿ ಸಿದ್ದಪಡಿಸಿದ ಶಾಲಾ ಪಠ್ಯ ಪುಸ್ತಕಗಳನ್ನು ತುರಾತುರಿಯಲ್ಲಿ ಮರು ಪರಿಷ್ಕರಿಸಲು ರೋಹಿತ್ ಚಕ್ರವರ್ತಿ ಎಂಬುವವರ ನೇತೃತ್ವದಲ್ಲಿ ಪಠ್ಯ ಮರು ಪರಿಷ್ಕರಣೆ ಸಮಿತಿಯನ್ನು ನೇಮಿಸಿ ಅದರ ಶಿಫಾರಸ್ಸಿನ ಅನ್ವಯ ಭಾಷಾ ಪಠ್ಯ ಹಾಗೂ ಸಮಾಜ ವಿಜ್ಞಾನ ಪಠ್ಯಗಳಲ್ಲಿ ಖಂಡನಾರ್ಹ ಬದಲಾವಣೆ ತರಲಾಗಿದೆ. ಈ ಪುಸ್ತಕಗಳನ್ನು ಸರ್ಕಾರ ಮಕ್ಕಳಿಗೆ ಹಂಚಲು ಹೂರಟಿದೆ. ಇದು ಅತಂತ್ಯ ಬೇಜವಾಬ್ದಾರಿಯ ಕ್ರಮವಾಗಿದೆ ಇದರಿಂದ ಮಕ್ಕಳ ಮತ್ತು ಶಿಕ್ಷಣದ ಮೇಲೆ ನಕಾರಾತ್ಮಕವಾದ ಪರಿಣಾಮ ಬೀರಲಿದೆ ಎಂದಿದ್ದಾರೆ.

ಪಠ್ಯ ಪುಸ್ತಕಗಳಲ್ಲಿ ಬದಲಾವಣೆ ತರುವಾಗ ಸರ್ಕಾರ ಮನಸಿಗೆ ಬಂದಂತೆ ಮಾಡುವಂತಿಲ್ಲ ಇದಕ್ಕೆ ತನ್ನದೆ ಆದ ರೀತಿ, ನೀತಿ ನಿಯಮಗಳಿವೆ ಆದರೆ ಸರ್ಕಾರ ಇವುಗಳನ್ನು ಪಾಲಿಸಿಲ್ಲ, ಸಂವಿದಾನ ತತ್ವಗಳಿಗೆ ಅನುಸಾರವಾಗಿ ಸಮಿತಿಗಳನ್ನು ರಚನೆ ಮಾಡಬೇಕಿದೆ ಯಾರೂದೂ ಅಜೆಂಡಾವನ್ನು ಶಿಕ್ಷಣದಲ್ಲಿ ತರಲು ಸರ್ಕಾರ ಆತುರವಾಗಿ ತನ್ನ ಬೆಂಬಲಿಗರನ್ನು ಸಮಿತಿಯಲ್ಲಿ ಇರಿಸಿದೆ. ಕನ್ನಡ ಸಂಸ್ಕೃತಿ ಪರಂಪರೆ ತಕ್ಕದಾದ ಪಠ್ಯವನ್ನು ಯಾವುದೇ ಕಾರಣ ನೀಡಿದೆ ತೆಗೆದು ಹಾಕಿದೆ ಇದರ ಬದಲಿಗೆ ಸಂಘ ಪರಿಹಾರದ ಸಿದ್ದಾಂತ ಸಂಘಟನೆಯ ಪರವಾದ ಪಠ್ಯವನ್ನು ತುರುಕಲಾಗಿದೆ. ಇದು ಕುವೆಂಪು ಹೇಳಿದ ವಿಶ್ವ ಮಾನವತೆ ವಿರುದ್ದ ದಿಕ್ಕಿನಲ್ಲಿ ನಡೆದಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ನೇಮಿಸಿರುವ ಸಮಿತಿಯಲ್ಲಿ ಯಾವುದೇ ಶಿಕ್ಷಣ ತಜ್ಞ ಇರುವುದಿಲ್ಲ, ರೋಹಿತ್ ಚಕ್ರವರ್ತಿ ಕುವೆಂಪುರವರ ನಾಡ ಗೀತೆಯನ್ನು ವಿಕೃತಗೂಳಿಸಿ ಪ್ರಚಾಋ ಮಾಡಿದ್ದಲ್ಲದೆ ಕುವೆಂಪು ಮತ್ತು ತೇಜಸ್ವಿಯವರನ್ನು ಬ್ರಾಹ್ಮಣ ವಿರೋಧಿ ಎಂದು ಬಿಂಬಿಸಿದ್ದಾರೆ. ಬೇಜವಾಬ್ದಾರಿ ವ್ಯಕ್ತಿಗೆ ಸರ್ಕಾರ ಉನ್ನತವಾದ ಹುದ್ದೆಯನ್ನು ನೀಡಿರುವುದು ಸರಿಯಲ್ಲ, ಇಂತಹ ಅಯೋಗ್ಯ ವ್ಯಕ್ತಿಯ ಮೂಲಕ ಮಕ್ಕಳ ಓದುವ ಪಠ್ಯ ಪುಸ್ತಕ ಬದಲಾಯಿಸಲು ಅವಕಾಶ ಮಾಡಿಕೂಟ್ಟಿರುವುದಕ್ಕೆ ಸರ್ಕಾರ ಕನ್ನಡಿಗರ ಬಳಿ ಕ್ಷಮೆ ಯಾಚಿಸಬೇಕು, ಕೂಡಲೇ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಮರು ಪರಿಶೀಲನಾ ಸಮಿತಿಯನ್ನು ರದ್ದುಪಡಿಸಿ ಆದೇಶವನ್ನು ಹೂರಡಿಸುವಂತೆ ಒತ್ತಾಯಿಸಲಾಯಿತು.

ಕರವೇ ಜಿಲ್ಲಾಧ್ಯಕ್ಷ ರಮೇಶ್, ಉಪಾಧ್ಯಕ್ಷರಾದ ಶಿವಮೂರ್ತಿ, ವೆಂಕಟೇಶ್, ಲಕ್ಷ್ಮಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ರಾಜಪ್ಪ, ಹಿರಿಯೂರಿನ ಉದಯ್ ಕುಮಾರ್, ಜಿಲ್ಲಾ ಸಂಚಾಲಕ ಗಣೇಶ್, ಮಹಿಳಾ ಘಟಕದ ಅಧ್ಯಕ್ಷರಾದ ಚಂದ್ರಕಲಾ, ಚಳ್ಳಕೆರೆಯ ಜಯಲಕ್ಷ್ಮಿ, ಮಂಜುಳ ಸುಮ, ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

error: Content is protected !!