Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್‌ನಿಂದ ಮೇಣದಬತ್ತಿ ಪಥಸಂಚಲನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಆ. 14 : ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಅಂಗವಾಗಿ ಗುರುವಾರ ಸಂಜೆ ಮೇಣದಬತ್ತಿಗಳೊಂದಿಗೆ ಪಥಸಂಚಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಧಿಕಾರಿಗಳ ಕಚೇರಿ ವೃತ್ತದ ಬಳಿ ಇರುವ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂದೆ ಸೇರಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು, ವಿವಿಧ ಘಟಕದ ಅಧ್ಯಕ್ಷರು, ಕಾರ್ಯಕರ್ತರು, ಕೈಯಲ್ಲಿ ಮೊಂಬತ್ತಿಯನ್ನು ಹಿಡಿದು ಮತಗಳ್ಳತನದ ವಿರುದ್ದ ಘೋಷಣೆಗಳನ್ನು ಕೂಗುತ್ತಾ, ಮತಗಳ್ಳರೇ ಅಧಿಕಾರನ್ನು ಬಿಡಿ ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಎಂಬ ಭಿತ್ತಿ ಪತ್ರವನ್ನು ಹಿಡಿದು ದಾರಿಯುದ್ದಕ್ಕೂ ಸಾಗಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪ್ರಾರಂಭವಾದ ಪಥ ಸಂಚಲನ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿವರೆಗೆ ಸಾಗಿ
ಅಲ್ಲಿಂದ ಗಾಂಧಿವೃತ್ತದವರೆಗೆ ಪಥ ಸಂಚಲನವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ತಾಜ್‍ಪೀರ್, ನಗರಾಭೀವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಆರ್.ಕೆ.ಸರ್ದಾರ್, ಗ್ಯಾರೆಂಟಿ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಶಿವಣ್ಣ, ತಾಲ್ಲೂಕು ಅಧ್ಯಕ್ಷರಾದ ಪ್ರಕಾಶ್, ಪ್ರಧಾನ ಕಾರ್ಯದರ್ಶಿಕೆ.ಪಿ.ಸಂಪತ್ ಕುಮಾರ್, ಮೈಲಾರಪ್ಪ, ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಗೀತಾ ನಂದಿನಿ ಗೌಡ, ಮಂಜುನಾಥ್, ಪ್ರಕಾಶ್ ರಾಮನಾಯ್ಕ್, ಖುದ್ದುಸ್, ಓಬಿಸಿ ಘಟಕದ ಅಧ್ಯಕ್ಷ ಎನ್.ಡಿ.ಕುಮಾರ್, ಲಕ್ಷ್ಮೀಕಾಂತ್, ಮೋಕ್ಷಾ ರುದ್ರ ಸ್ವಾಮಿ,ಅಂಜನಪ್ಪ, ಚೋಟು, ಮುದಾಸಿರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment