Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ನಲ್ಲಿದ್ರೆ ಸಿಎಂ ಆಗಲ್ಲ : ಹಳೆ ಹೇಳಿಕೆ ನೆನಪಿಸಿದ್ದಕ್ಕೆ ಯಡಿಯೂರಪ್ಪ ಏನಂದ್ರು..?

---Advertisement---

 

ಶಿವಮೊಗ್ಗ: ರಾಜ್ಯ ರಾಜಕಾರಣದಲ್ಲಿ ಸದ್ಯಕ್ಕೆ ಸಿಎಂ ಖುರ್ಚಿ ಕದನ ಸದ್ದು ಮಾಡ್ತಿದೆ. ನಾ ಕೊಡೆ ನೀ ಬಿಡೆ ಅನ್ನೋ ಹಾಗೇ ಜಗ್ಗಾಟ ನಡೀತಾ ಇದೆ. ಸಿದ್ದರಾಮಯ್ಯ ಅವರು ನಾನೇ ಸಿಎಂ ಆಗಿರ್ತೇನೆ ಅಂದ್ರೆ, ಡಿಕೆ ಶಿವಕುಮಾರ್ ಅವರು ನಾನು ಈ ಅವಧಿಯಲ್ಲಿಯೇ ಸಿಎಂ ಆಗ್ಬೇಕು ಅಂತ ಹಠ ಮಾಡ್ತಿದ್ದಾರೆ. ಅದಕ್ಕಾಗಿ ನಾನಾ ರೀತಿಯ ಪ್ರಯತ್ನಗಳನ್ನು ಮಾಡ್ತಿದ್ದಾರೆ. ಇದೀಗ ಅವರ ಸಿಎಂ ಹಗ್ಗಜಗ್ಗಾಟದ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು ಅಭಿವೃದ್ಧಿ ಆಗದೆ ಇರುವ ಬಗ್ಗೆ ಬೇಸರ ಹೊರ ಹಾಕಿದ್ದು, ರಾಜ್ಯದಲ್ಲಿ ಆಗ್ತಿರುವ ಕುರ್ಚಿ ಕದನದ ಬಗ್ಗೆ ಮಾತನಾಡಿದ್ದಾರೆ. ಇದು ಕಾಂಗ್ರೆಸ್ ವಿಚಾರ. ನಮಗೆ ಸಂಬಂಧವಿಲ್ಲ. ಕಳೆದ ಏಳೆಂಟು ತಿಂಗಳಿನಿಂದ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸದ ಕಡೆಗೆ ಗಮನ ಹರಿಸಿಲ್ಲ. ಅದನ್ನ ಬಿಟ್ಟು ಯಾರು ಮುಖ್ಯಮಂತ್ರಿ ಆಗಬೇಕು ಎಂಬುದರಲ್ಲಿಯೇ ತಲ್ಲೀನರಾಗಿದ್ದಾರೆ. ಇಡೀ ರಾಜ್ಯದ ಜನ ಇವರ ಆಡಳಿತದಿಂದ ಬೇಸತ್ತು ಛೀಮಾರಿ ಹಾಕುತ್ತಿದ್ದಾರೆ.

ಇಷ್ಟಾದರೂ ಸರಿಪಡಿಸಿಕೊಳ್ಳದೆ ತಮ್ಮದೆ ಗೊಂದಲದಲ್ಲಿ ನಿರತರಾಗಿದ್ದಾರೆ. ಮುಂಬರುವ ದಿನದಲ್ಲಿ ರಾಜ್ಯದ ಜನರೇ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಸರ್ಕಾರದ ವಿರುದ್ಧ ಬಿಎಸ್​ವೈ ಆಕ್ರೋಶ ಹೊರಹಾಕಿದ್ದಾರೆ. ಇದೇ ವೇಳೆ ಈ ಹಿಂದೆ ಯಡಿಯೂರಪ್ಪ ಅವರು ಹೇಳಿದ ಮಾತನ್ನ ಮಾಧ್ಯಮದವರೇ ನೆನಪಿಸಿದಾಗ, ಒಂದು ಕ್ಷಣ ನಕ್ಕಿದ್ದಾರೆ. ಅಂದ್ರೆ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ರೆ ಖಂಡಿತ ನೀನು ಸಿಎಂ ಆಗಲ್ಲ ಎಂಬ ಮಾತನ್ನ ಈ ಹಿಂದೆ ಯಡಿಯೂರಪ್ಪ ಅವರು ಹೇಳಿದ್ದರು. ಆ ಮಾತಿಗೆ ಉತ್ತರ ನಿರೀಕ್ಷಿಸಿದಾಗ ನಕ್ಕು ಮುಂದಕ್ಕೆ ಸಾಗಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now