Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನಲ್ಲಿ ಸೆರೆ ಹಿಡಿದ ಚಿರತೆ ಗುಂಡೇಟಿನಿಂದ ಸಾವು : ಅರಣ್ಯ ಕಾಯ್ದೆಯಲ್ಲಿ ಇದಕ್ಕೆ ಅನುಮತಿ ಇದ್ಯಾ..?

Facebook
Twitter
Telegram
WhatsApp

 

ಬೆಂಗಳೂರು: ಸತತ ಮೂರು ದಿನಗಳಿಂದ ಜನರನ್ನು ಆತಂಕಕ್ಕೆ ಈಡು ಮಾಡಿದ್ದ ಚಿರತೆ ಗುಂಡೇಟಿಂದ ಸಾವನ್ನಪ್ಪಿದೆ. ಕೂಡ್ಲು ಗೇಟ್ ಬಳಿಯ ಕೃಷ್ಣಾರೆಡ್ಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಚಿರತೆ ಸೆರೆಯಾಗಿತ್ತು. ಗುಂಡೇಟಿನಿಂದ ಸಾವನ್ನಪ್ಪಿದೆ ಎಂಬುದು ಖಚಿತವಾಗಿದೆ.

ಕಳೆದ ಐದು ದಿನದಿಂದ ಕೂಡ್ಲು ಗೇಟ್ ಬಳಿ ಓಡಾಡುತ್ತಿದ್ದ ಚಿರತೆ ಸಾವನ್ನಪ್ಪಿದೆ. ಗುಂಡೇಟು ತಗುಲಿದ ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ತರಲಾಯಿತು. ಗಾಯಗೊಂಡ ಚಿರತೆಗೆ ಚಿಕಿತ್ಸೆ ನೀಡಿದರೂ ಅದು ಫಲಕಾರಿಯಾಗಲಿಲ್ಲ ಎಂದು ಸಿಸಿಎಫ್ ಅಧಿಕಾರಿ ಲಿಂಗರಾಜು ಸ್ಪಷ್ಟಪಡಿಸಿದ್ದಾರೆ.

ಗುಂಡು ಹೊಡೆದ ಕಾರಣಕ್ಕೆ ಚಿರತೆ ಸಾವನ್ನಪ್ಪಿದೆ. ಈ ಸಂಬಂಧ ಅರಣ್ಯ ಕಾಯ್ದೆಯಲ್ಲಿ ಇರುವ ಮಾಹಿತಿ ಬಗ್ಗೆ ಮಾತನಾಡಿರುವ ಅಧಿಕಾರಿ ಲಿಂಗರಾಜು, ಚಿರತೆ ಹಿಡಿಯುವುದು ಕಷ್ಟವಾದಾಗ ಮೇಲಾಧಿಕಾರಿಗಳಿಂದಾನೇ ಅನುಮತಿ ಪಡೆದಿದ್ದೇವೆ. ಸಿಬ್ಬಂದಿಗಳ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದಾಗ ಗುಂಡು ಹಾರಿಸಲು ಅರಣ್ಯ ಕಾಯ್ದೆಯಲ್ಲಿ ಅನುಮತಿ ಇದೆ. ಗುಂಡು ಹಾರಿಸಲು ನಾವೂ ಅನುಮತಿ ಪಡೆದಿದ್ದೆವು ಎಂದಿದ್ದಾರೆ. ಚಿರತೆಯನ್ನು ಹಿಡಿಯುವುದಕ್ಕೆ ಗುಂಡು ಹಾರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!