ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬಾಂಬೆ ಮಿಠಾಯಿ, ಐಸ್ ಕ್ಯಾಂಡಿ ಅಂದ್ರೆ ಯಾರಿಗೆ ತಾನೇ ಇಷ್ಟ ಆಗಲ್ಲ ಹೇಳಿ. ಹಳ್ಳಿಗಳ ಕಡೆಗಳಲ್ಲಿ ಪುಯ್ ಪುಯ್ ಅಂತ ಸೌಂಡ್ ಮಾಡಿಕೊಂಡು ಬಾಂಬೆ ಮಿಠಾಯಿ ಮಾರಿಕೊಂಡು ಬಂದರೆ, ಮಕ್ಕಳು ಓಡೋಡಿ ಹೋಗುತ್ತಾರೆ. ಈ ನಡವಳಿಕೆ ಈಗಲೂ ಏನು ನಿಂತಿಲ್ಲ. ಆದರೆ ಈಗ ಶಾಕಿಂಗ್ ವಿಚಾರವೊಂದು ಹೊರ ಬಿದ್ದಿದೆ. ಬಾಂಬೆ ಮಿಠಾಯಿಯನ್ನು ನಾಲಿಗೆ ರುಚಿ ಎಂದುಕೊಂಡು ಸವಿದರೆ ಕ್ಯಾನ್ಸರ್ ರೋಗವನ್ನು ಸ್ವಾಗತಿಸಿದಂತೆಯೇ ಸರಿ ಎನ್ನುತ್ತಿವೆ ಸಂಶೋಧನೆಗಳು.
ಬಾಂಬೆ ಮಿಠಾಯಿಯ ಬಗ್ಗೆ ಗಿಂಡಿಯ ಸರ್ಕಾರಿ ಆಹಾರ ವಿಶ್ಲೇಷಣಾ ಪ್ರಯೋಗಾಲಯ ಈ ಬಗ್ಗೆ ಅಧ್ಯಯನ ನಡೆಸಿದೆ. ಕಾಟನ್ ಕ್ಯಾಂಡಿಯಲ್ಲಿ ಜವಳಿ ಬಣ್ಣ ಮತ್ತು ರಾಸಾಯನಿಕ ರೋಡೋಮಿನ್ ಬಿ ಪತ್ತೆಯಾಗಿದೆ. ಈ ಕೆಮಿಕಲ್ ಕ್ಯಾನ್ಸರ್ ರೋಗ ಬರುವುದಕ್ಕೆ ಸುಲಭವಾಗಿ ದಾರಿ ಮಾಡಿಕೊಡುತ್ತದೆ ಎನ್ನಲಾಗುತ್ತಿದೆ. ಹೀಗಾಗಿ ಈ ರೀತಿಯ ಕಲರ್ ಫುಲ್ ಕ್ಯಾಂಡಿ, ಮಿಠಾಯಿ ತಿನ್ನುವ ಮುನ್ನ ಎಚ್ಚರವಹಿಸುವುದು ಬಹಳ ಮುಖ್ಯವಾಗುತ್ತದೆ.
ಈಗಾಗಲೇ ಸಾಕಷ್ಟು ರೋಗ ಬರುವಂತ ಆಹಾರಗಳೇ ಜನರಿಗೆ ಸಿಗುತ್ತಿವೆ. ಪ್ಲಾಸ್ಟಿಕ್ ಬಳಕೆಯಿಂದ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು ಎಂದೇ ಹೇಳಲಾಗುತ್ತದೆ. ಆದರೆ ಅದೇ ಪ್ಲಾಸ್ಟಿಕ್ ಕವರ್ ನಲ್ಲಿ ಊಟವನ್ನು ಪಾರ್ಸಲ್ ತರಲಾಗುತ್ತದೆ. ಕೆಲವೊಂದು ಲೋಕಲ್ ಕಾಸ್ಮೆಟಿಕ್ ಗಳಿಂದಾನೂ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚಾಗಿದೆ ಎಂದೇ ಹೇಳಲಾಗುತ್ತದೆ. ಇದೀಗ ಬಾಂಬೆ ಮಿಠಾಯಿಂದ ಕ್ಯಾನ್ಸರ್ ಬರಯವ ಸಾಧ್ಯತೆಗಳಿವೆ ಎಂದು ಗೊತ್ತಾದ ಮೇಲೆ ತಮಿಳುನಾಡು ಸರ್ಕಾರ ಮಿಠಾಯಿಯನ್ನು ಬ್ಯಾನ್ ಮಾಡಿದೆ. ಹಾಗೇ ಪುದುಚೇರಿಯೂ ಜನರ ಆರೋಗ್ಯ ದೃಷ್ಠಿಯಿಂದ ಮಿಠಾಯಿಯನ್ನು ಬ್ಯಾನ್ ಮಾಡಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್