Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಪಾಳು ಬಿದ್ದ ಮನೆಯಲ್ಲಿ ಅಸ್ಥಿಪಂಜರ ಪತ್ತೆ ಪ್ರಕರಣ : ಸಾವಿಗೆ ಕಾರಣವಾದರಾ ಆ ವ್ಯಕ್ತಿಗಳು ಯಾರು ? 

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.29 : ನಗರದ ಜೈಲ್ ರಸ್ತೆಯ ಪಾಳು ಬಿದ್ದ ಮನೆಯೊಂದರಲ್ಲಿ ಐದು ಜನರ ಅಸ್ಥಿಪಂಜರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕುಗೊಂಡಿದೆ. ಇಂದು ಬೆಳಿಗ್ಗೆ ವಿಧಿ ವಿಜ್ಞಾನ ತಂತ್ರಜ್ಞರು ಭೇಟಿ ನೀಡಿ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರ ನಡುವೆ ಕೇಸ್ ಗೊಂದು ಟ್ವಿಸ್ಟ್ ಸಿಕ್ಕಿದೆ. ಅಸ್ಥಿಪಂಜರ ಪತ್ತೆಯಾದವರ ಮನೆಯಲ್ಲಿ ಡೆತ್ ನೋಟ್ ಸಿಕ್ಕಿದೆ. ಆ ಡೆತ್ ನೋಟ್ ನಲ್ಲಿ ಇಬ್ಬರ ಹೆಸರು ಪತ್ತೆಯಾಗಿದೆ.


ಅಸ್ಥಿಪಂಜರ ಪತ್ತೆಯಾದ ಬಳಿಕ ಇದು ಕೊಲೆಯೋ, ಆತ್ಮಹತ್ಯೆಯೋ ಎಂಬ ಅನುಮಾನಗಳು ಶುರುವಾಗಿದ್ದವು. ಇದೀಗ ಪತ್ತೆಯಾಗಿರುವ ಡೆತ್ ನೋಟ್ ನಲ್ಲಿ ಆತ್ಮಹತ್ಯೆ ಎಂಬಂತೆ ಉಲ್ಲೇಖವಾಗಿದೆ. ಆತ್ಮಹತ್ಯೆಗೆ ಕಾರಣವೇನು ಎಂಬುದನ್ನು ಉಲ್ಲೇಖ ಮಾಡಲಾಗಿದೆ.  ಇಬ್ಬರು ವ್ಯಕ್ತಿಗಳು ನೀಡುತ್ತಿರುವ ಚಿತ್ರಹಿಂಸೆಯಿಂದಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದೇವೆ ಎಂದು ಎಂದು ಡೆತ್ ನೋಟ್ ನಲ್ಲಿ ಬರೆಯಲಾಗಿದೆ.

ಚಿತ್ರದುರ್ಗದ ಓರ್ವ ವ್ಯಕ್ತಿ ಹಾಗೂ ದೊಡ್ಡ ಸಿದ್ದವ್ವನಹಳ್ಳಿ ಗ್ರಾಮದ ಓರ್ವ ವ್ಯಕ್ತಿ ಎಂಬ ಶಂಕೆ ವ್ಯಕ್ತವಾಗಿದ್ದು, ಹೆಸರು ಮಾತ್ರ ಬಹಿರಂಗವಾಗಿಲ್ಲ. ಜಮೀನು ಪ್ರಕರಣದ ವಿಚಾರಣೆ ವೇಳೆ ಇಬ್ಬರು ವ್ಯಕ್ತಿಗಳು ನಮಗೆ ಹಿಂಸೆ ನೀಡುತ್ತಿದ್ದಾರೆ. ಅವರಿಂದಲೇ ಆತ್ಮಹತ್ಯೆಗೆ ಶರಣಾಗುತ್ತಿದ್ದೇವೆ ಎಂದು ಡೆತ್ ನೋಟ್ ನಲ್ಲಿ ಹೇಳಿಕೊಂಡಿದ್ದಾರೆ. ಈ ವ್ಯಕ್ತಿಗಳ ಹೆಸರನ್ನು ಪೊಲೀಸರು ಬಹಿರಂಗಗೊಳಿಸಿಲ್ಲ. ಅಲ್ಲದೇ ಡೆತ್‌ನೋಟ್‌ನಲ್ಲಿಯೂ ಸಾಕಷ್ಟು ಅನುಮಾನಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಇಬ್ಬರ ವ್ಯಕ್ತಿಗಳ ಹುಡುಕಾಟಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ನಿವೃತ್ತ ಎಂಜಿನಿಯರ್ ಜಗನ್ನಾಥ ರೆಡ್ಡಿ (70), ಪತ್ನಿ ಪ್ರೇಮಾವತಿ (60), ಮಗಳು ತ್ರಿವೇಣಿ (42), ಮಗ ಪುತ್ರರಾದ ಕೃಷ್ಣಾ ರೆಡ್ಡಿ (40) ಹಾಗೂ ನರೇಂದ್ರ ರೆಡ್ಡಿ (38) ಎಂಬುವವರು ವಾಸವಾಗಿದ್ದರು ಎಂದು ತಿಳಿದು ಬಂದಿದೆ. ಜಗನ್ನಾಥ ರೆಡ್ಡಿ ಅವರಿಗೆ ಮೂವರು ಗಂಡು ಮಕ್ಕಳು, ಒರ್ವ ಪುತ್ರಿ ಇದ್ದರು. ಯಾರಿಗೂ ಮದುವೆ ಆಗಿರಲಿಲ್ಲ ಎನ್ನಲಾಗಿದ್ದು , ಇನ್ನೊಬ್ಬ ಹಿರಿಯ ಮಗ ಮಂಜುನಾಥ ರೆಡ್ಡಿ ಎಂಬುವವರು ಈ ಹಿಂದೆಯೇ ಮೃತಪಟ್ಟಿದ್ದರು ಎನ್ನುತ್ತಾರೆ ಸಂಬಂಧಿಕರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!