Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಪಾಳುಬಿದ್ದ ಮನೆಯಲ್ಲಿ ಅಸ್ಥಿಪಂಜರ ಪತ್ತೆ ಪ್ರಕರಣ : 5 ಕೈಗುರುತು, ಇಬ್ಬರ ಕಾಲಲ್ಲಿ ಹಗ್ಗ , ಮತ್ತಷ್ಟು ಕುತೂಹಲ ಮೂಡಿಸುತ್ತಿರುವ ಕುರುಹುಗಳು…!

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.31 : ಚಳ್ಳಕೆರೆ ಗೇಟ್ ಬಳಿಯ ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿ ಪಂಜರ ಸಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಸ್ಥಿಪಂಜರ ಸಿಕ್ಕ ಮನೆಯಲ್ಲಿ ಇಂದು ಐದು ಕೈಗುರುತು ಕೂಡ ಪತ್ತೆಯಾಗಿದೆ.

ಮನೆಯೊಳಗೆ ಸಿಗುತ್ತಿರುವ ಸಾಕ್ಷಿಗಳು ಇದು ಕೊಲೆಯೋ..? ಆತ್ಮಹತ್ಯೆಯೋ ಎಂಬ ಅನುಮಾನವನ್ನು ಹುಟ್ಟುಹಾಕಿದೆ. ಈ ಪಾಳು ಬಿದ್ದ ಮನೆಯಲ್ಲಿ ನಿವೃತ್ತ ಇಂಜಿನಿಯರ್ ಜಗನ್ನಾಥ ರೆಡ್ಡಿ, ಪತ್ನಿ‌ ಪ್ರೇಮಾ ರೆಡ್ಡಿ, ತ್ರಿವೇಣಿ ರೆಡ್ಡಿ, ಕೃಷ್ಣಾ ರೆಡ್ಡಿ ಹಾಗೂ ನರೇಂದ್ರ ರೆಡ್ಡಿ ವಾಸವಾಗಿದ್ದರು ಎನ್ನಲಾಗುತ್ತಿದೆ. ಈ ಐವರದ್ದೇ ಅಸ್ಥಿಪಂಜರ ಎಂಬ ಅನುಮಾನದ ಜೊತೆಗೆ ಈಗ ಐದು ಕೈಗಳ ಗುರುತು ಕೂಡ ಸಿಕ್ಕಿದೆ.

ಈ ಮೂಲಕ ಪೊಲೀಸರ ತನಿಖೆ ಚುರುಕುಗೊಂಡಿದೆ. ಹಾಲ್ ನಲ್ಲಿ ಇರುವ ಗೋಡೆಗಳ ಮೇಲೆ ಐದು ಕೈಗಳ ಗುರುತು ಪತ್ತೆಯಾಗಿದೆ. ಇದರ ಜೊತೆಗೆ ಎರಡು ಶವಗಳ ಕಾಲಲ್ಲಿ ಹಗ್ಗ ಪತ್ತೆಯಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಮಾದರಿಯನ್ನು ಕಳುಹಿಸಲಾಗಿದೆ. ವರದಿ ಬಂದ ಮೇಲೆ ಇನ್ನಷ್ಟು ವಿಚಾರಗಳು ಹೊರ ಬರಲಿದೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರ ಜೊತೆಗೆ ಈಗ ಆ ಐದು ಕೈ ಗುರುತು ಯಾರದ್ದು‌ ಎಂಬ ಪ್ರಶ್ನೆಗಳು ಮೂಡಿವೆ. ಮೊದಲೇ ಐದು ಶವಗಳು ಸಿಕ್ಕಿವೆ. ಈಗ ಐದು ಕೈಗುರುತುಗಳು ಸಿಕ್ಕಿರುವುದು ಆಶ್ಚರ್ಯವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!