Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆತ್ಮಹತ್ಯೆ ಮಾಡಿಕೊಂಡ KAS ಆಫೀಸರ್ ಪ್ರಕರಣ : ಪೊಲೀಸರಿಗೆ ತಲೆನೋವಾದ ಕೇಸ್..!

Facebook
Twitter
Telegram
WhatsApp

 

ಬೆಂಗಳೂರು: ನಿನ್ನೆ ಹೈಕೋರ್ಟ್ ವಕೀಲೆ ಚೈತ್ರಾ.ಬಿ. ಗೌಡ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ವಕೀಲೆಯಾಗಿ, ಮಾಡೆಲ್ ಆಗಿ ಚೆನ್ನಾಗಿದ್ದ ವಕೀಲೆ ಇದ್ದಕ್ಕಿದ್ದ ಹಾಗೇ ಹೀಗೆ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಸಂಜಯನಗರ ಪೊಲೀಸರು ಈ ಪ್ರಕರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದು, ಡೆತ್ ನೋಟ್ ಸಿಕ್ಕಿದೆ. ಆದರೆ ಈ ಡೆತ್ ನೋಟ್ ನಲ್ಲಿ ಬರೆದ ವಿಚಾರ ಪೊಲೀಸರ ತಲೆ ಕೆಡಿಸಿದೆ.

ಮೂರು ತಿಂಗಳ ಹಿಂದೆಯೇ ಚೈತ್ರಾ ಈ ಡೆತ್ ನೋಟ್ ಬರೆದಿಟ್ಟಿದ್ದಾರೆ. ‘ನಾನು ಕಳೆದ ಕೆಲವು ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದೇನೆ. ಆದರೆ ಅದರಿಂದ ಹಿರಗೆ ಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಮಗಳನ್ನು ಚೆನ್ನಾಗಿ ನೊಡಿಕೊಳ್ಳಿ. ಲೈಫ್ ಎಂಜಾಯ್ ಮಾಡಿ. ನನ್ನ ಗಂಡ ತುಂಬಾ ಒಳ್ಳೆಯವರು’ ಎಂದು ಬರೆದಿದ್ದಾರೆ. ಈ ಡೆತ್ ನೋಟ್ ಸಿಕ್ಕ ಮೇಲೆ ಹಲವು ಅನುಮಾನಗಳು ಮೂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಚೈತ್ರಾ ಹೈಕೋರ್ಟ್ ನಲ್ಲಿ ವಕೀಲೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. 2016ರಲ್ಲಿ ಕೆಐಡಿಬಿಯಲ್ಲಿ ಉಪವಿಭಾಗಾಧಿಕಾರಿಯಾಗಿರುವ ಶಿವಕುಮಾರ್ ಅವರನ್ನು ಮದುವೆಯಾಗಿದ್ದರು. ಇಬ್ಬರಿಗೂ ಒಂದು ಮಗು ಕೂಡ ಇದೆ. ಸದ್ಯ ಪೊಲೀಸರು ಎಲ್ಲಾ ಆಯಾಮದಿಂದಾನು ತನಿಖೆ ನಡೆಸುತ್ತಿದ್ದಾರೆ. ಚೈತ್ರಾ ಸಾವಿಗೂ ಮುನ್ನ ಯಾರಿಗೆಲ್ಲಾ ಕರೆ ಮಾಡಿದ್ದರು, ವಾಟ್ಸಾಪ್ ಚಾಟ್ ಹೀಗೆ ಎಲ್ಲಾ ವಿಚಾರವನ್ನು ತನಿಖೆ ನಡೆಸುತ್ತಿದ್ದು, ಚೈತ್ರಾ ಸಾವಿಗೆ ಕಾರಣವೇನು ಎಂಬುದನ್ನು ಪತ್ತೆ ಮಾಡಲು ಪ್ರಯತ್ನ ಪಡುತ್ತಿದ್ದಾರೆ. ಚೈತ್ರಾ, ವಕೀಲೆಯಾಗಿ, ಮಾಡೆಲ್ ಆಗಿ, ಬ್ಯಾಡ್ಮಿಂಟನ್ ನಲ್ಲೂ ಗುರುತಿಸಿಕೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಎಸ್ಟಿ ವಿಭಾಗದ ಅಧ್ಯಕ್ಷ ಬಿ.ಮಂಜುನಾಥ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಮಂಜುನಾಥ್ ಲೋಕೋಪಯೋಗಿ ಸಚಿವ ಸತೀಶ್‍ಜಾರಕಿಹೊಳಿರವರ

ರಾಜಕೀಯದಲ್ಲಿ ಮುಸ್ಲಿಂ ಸಮಾಜಕ್ಕೆ ಅಧಿಕಾರವಿಲ್ಲ, ಆದ್ಯತೆಯಿಲ್ಲ, ಮುಸ್ಲಿಮರು ಕೇವಲ ಮತ ನೀಡುವುದಕ್ಕಷ್ಟೆ ಸೀಮಿತ : ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಶಿಕ್ಷಣದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಸಾಧನೆ ಮಾಡಿರುವವರನ್ನು ಗುರುತಿಸಿ ಸನ್ಮಾನಿಸಿದರೆ ಇತರೆಯವರಿಗೆ ಪ್ರೇರಣೆಯಾಗುತ್ತದೆಂದು

Kamala Harris: ಅಮೇರಿಕಾ ಅಧ್ಯಕ್ಷ ಸ್ಥಾನದ ಸನಿಹದಲ್ಲಿ ಭಾರತೀಯ ಮೂಲದ ಕಮಲಾ ಹ್ಯಾರಿಸ್..!

ಸುದ್ದಿಒನ್ : ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯ ಕಾವು ಜೋರಾಗಿದೆ. ಅಧ್ಯಕ್ಷೀಯ ರೇಸ್‌ಗೆ ಅಂತಿಮವಾಗಿ ಯಾರು ನಿಲ್ಲುತ್ತಾರೆ ಮತ್ತು ಯಾರು ಯಾರನ್ನು ಎದುರಿಸುತ್ತಾರೆ ಎಂಬ ವಿಷಯ ತೀವ್ರ ಕುತೂಹಲ ಮೂಡಿಸಿದೆ. ಪ್ರಸ್ತುತ ಡೆಮಾಕ್ರಟಿಕ್

error: Content is protected !!