Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆತ್ಮಹತ್ಯೆ ಮಾಡಿಕೊಂಡ KAS ಆಫೀಸರ್ ಪ್ರಕರಣ : ಪೊಲೀಸರಿಗೆ ತಲೆನೋವಾದ ಕೇಸ್..!

---Advertisement---

 

ಬೆಂಗಳೂರು: ನಿನ್ನೆ ಹೈಕೋರ್ಟ್ ವಕೀಲೆ ಚೈತ್ರಾ.ಬಿ. ಗೌಡ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ವಕೀಲೆಯಾಗಿ, ಮಾಡೆಲ್ ಆಗಿ ಚೆನ್ನಾಗಿದ್ದ ವಕೀಲೆ ಇದ್ದಕ್ಕಿದ್ದ ಹಾಗೇ ಹೀಗೆ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಸಂಜಯನಗರ ಪೊಲೀಸರು ಈ ಪ್ರಕರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದು, ಡೆತ್ ನೋಟ್ ಸಿಕ್ಕಿದೆ. ಆದರೆ ಈ ಡೆತ್ ನೋಟ್ ನಲ್ಲಿ ಬರೆದ ವಿಚಾರ ಪೊಲೀಸರ ತಲೆ ಕೆಡಿಸಿದೆ.

ಮೂರು ತಿಂಗಳ ಹಿಂದೆಯೇ ಚೈತ್ರಾ ಈ ಡೆತ್ ನೋಟ್ ಬರೆದಿಟ್ಟಿದ್ದಾರೆ. ‘ನಾನು ಕಳೆದ ಕೆಲವು ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದೇನೆ. ಆದರೆ ಅದರಿಂದ ಹಿರಗೆ ಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಮಗಳನ್ನು ಚೆನ್ನಾಗಿ ನೊಡಿಕೊಳ್ಳಿ. ಲೈಫ್ ಎಂಜಾಯ್ ಮಾಡಿ. ನನ್ನ ಗಂಡ ತುಂಬಾ ಒಳ್ಳೆಯವರು’ ಎಂದು ಬರೆದಿದ್ದಾರೆ. ಈ ಡೆತ್ ನೋಟ್ ಸಿಕ್ಕ ಮೇಲೆ ಹಲವು ಅನುಮಾನಗಳು ಮೂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಚೈತ್ರಾ ಹೈಕೋರ್ಟ್ ನಲ್ಲಿ ವಕೀಲೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. 2016ರಲ್ಲಿ ಕೆಐಡಿಬಿಯಲ್ಲಿ ಉಪವಿಭಾಗಾಧಿಕಾರಿಯಾಗಿರುವ ಶಿವಕುಮಾರ್ ಅವರನ್ನು ಮದುವೆಯಾಗಿದ್ದರು. ಇಬ್ಬರಿಗೂ ಒಂದು ಮಗು ಕೂಡ ಇದೆ. ಸದ್ಯ ಪೊಲೀಸರು ಎಲ್ಲಾ ಆಯಾಮದಿಂದಾನು ತನಿಖೆ ನಡೆಸುತ್ತಿದ್ದಾರೆ. ಚೈತ್ರಾ ಸಾವಿಗೂ ಮುನ್ನ ಯಾರಿಗೆಲ್ಲಾ ಕರೆ ಮಾಡಿದ್ದರು, ವಾಟ್ಸಾಪ್ ಚಾಟ್ ಹೀಗೆ ಎಲ್ಲಾ ವಿಚಾರವನ್ನು ತನಿಖೆ ನಡೆಸುತ್ತಿದ್ದು, ಚೈತ್ರಾ ಸಾವಿಗೆ ಕಾರಣವೇನು ಎಂಬುದನ್ನು ಪತ್ತೆ ಮಾಡಲು ಪ್ರಯತ್ನ ಪಡುತ್ತಿದ್ದಾರೆ. ಚೈತ್ರಾ, ವಕೀಲೆಯಾಗಿ, ಮಾಡೆಲ್ ಆಗಿ, ಬ್ಯಾಡ್ಮಿಂಟನ್ ನಲ್ಲೂ ಗುರುತಿಸಿಕೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment