Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಂಭಾಪುರಿ ಕಾರಿಗೆ ಚಪ್ಪಲಿ ಎಸೆದ ಕೇಸ್ : 59 ಜನರ ಮೇಲೆ ಕೇಸು ದಾಖಲು..!

---Advertisement---

 

ಬಾಗಲಕೋಟೆ: ಜಿಲ್ಲೆಯ ಕಲಾದಗಿ ಗ್ರಾಮದಿಂದ ತೆರಳುತ್ತಿದ್ದ ರಂಭಾಪುರಿ ಶ್ರೀಗಳ ಮೇಲೆ ಚಪ್ಪಲಿಯನ್ನು ಎಸೆದ ಘಟನೆ ನಡೆದಿತ್ತು. ಈ ಸಂಬಂಧ ಇದೀಗ 59 ಜನರ ಮೇಲೆ‌ ಕೇಸು ದಾಖಲಾಗಿದೆ. ಕಲಾದಗಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಕಲಂ 143, 147, 341, 355, 511, 149 ನಡಿ 59 ಜನರ ಮೇಲೆ‌ ಕೇಸು ದಾಖಲಾಗಿದೆ. ನಿನ್ನೆ ರಂಭಾಪುರಿ ಶ್ರೀಗಳು ಕಲಾದಗಿ ಗ್ರಾಮದ ಮಾರ್ಗವಾಗಿ ಉದಗಟ್ಟಿಗೆ ತೆರಳುತ್ತಿದ್ದರು. ಈ ವೇಳೆ ಕಾರಿಗೆ ಮುತ್ತಿಗೆ ಹಾಕಿದ್ದರು. ನಡುವೆಯೇ ಅವರ ಕಾರಿನ ಮೇಲೆ ಚಪ್ಪಲಿ ಎಸೆದ ಘಟನೆಯೂ ನಡೆದಿತ್ತು. ಈ ಸಂಬಂಧ ನಿನ್ನೆಯೇ ಮಾತನಾಡಿದ್ದ ರಂಭಾಪುರಿ ಶ್ರೀಗಳು ನ್ಯಾಯಾಲಯದಿಂದ ಬರುವ ತೀರ್ಪಿಗೆ ಬದ್ಧನಾಗಿರುತ್ತೇನೆ ಎಂದಿದ್ದರು.

2015ರಲ್ಲಿಕಲಾದಗಿಯ ಶ್ರೀ ಗುರುಲಿಂಗೇಶ್ವರ ಮಠದ ಅಂದಿನ ಪೀಠಾಧಿಪತಿ, ಶ್ರೀ ಚಂದ್ರಶೇಖರ ಸ್ವಾಮೀಜಿಯವರು ಲಿಂಗೈಕ್ಯರಾದ ಬಳಿಕ, ನೂತನ ಪೀಠಾಧಿಪತಿ ನೇಮಕ ವಿವಾದ ಭುಗಿಲೇಳುತ್ತದೆ. ಗ್ರಾಮಸ್ಥರು ವಿದ್ವತ್ ಇರುವಂತಹ ಸ್ವಾಮೀಜಿಯನ್ನು ಪೀಠಾಧಿಪತಿ ಮಾಡಲು ಪಟ್ಟು ಹಿಡಿಯುತ್ತಾರೆ. ಆದರೆ ರಂಭಾಪುರಿ ಶ್ರೀಗಳು, ಲಿಂಗೈಕ್ಯರಾಗಿದ್ದ ಶ್ರೀ ಚಂದ್ರಶೇಖರ ಸ್ವಾಮೀಜಿಯ ತಂಗಿಯ ಮಗ ಕೆ ಎಂ ಗಂಗಾಧರ ಅವರನ್ನು ಪೀಠಾಧಿಪತಿಯನ್ನಾಗಿ ನೇಮಿಸುತ್ತಾರೆ. ಹೀಗಾಗಿ ವಿವಾದ ದೊಡ್ಡಮಟ್ಟಕ್ಕೆ ತಿರುಗಿ ಗಲಾಟೆಯೇ ನಡೆದಿದೆ. ಇದಾದ ಬಳಿಕ ಮಠದ ಪೀಠಾಧಿಪತಿ ವಿವಾದ ನ್ಯಾಯಾಲಯದ ಮೆಟ್ಟಿಲೇರುತ್ತದೆ. ಇನ್ನೂ ಕೂಡ ವಿವಾದ ಜಿಲ್ಲಾ ನ್ಯಾಯಾಲಯದಲ್ಲಿದೆ. ಹೀಗಿರುವಾಗ ಸದ್ಯದ ಪೀಠಾಧಿಪತಿ ಕೆ ಎಂ ಗಂಗಾ್ದರ ಅವರು ಮಠವನ್ನು ದುರಸ್ತಿ ಮಾಡಿಸುವುದಕ್ಕೆ, ಮಠಕ್ಕೆ ಸಂಬಂಧಿಸಿದ ಹೊಲದಲ್ಲಿ ಉಳುಮೆ ಮಾಡಿಸುವುದು ಹಾಗೂ ಇತರೆ ಚಟುವಟಿಕೆಗಳನ್ನು ನಡೆಸಿದ್ದನ್ನು ವಿರೋಧಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...