Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಕೆ ಕೇಸ್ : ಸಿಐಡಿ ತನಿಖೆಯಲ್ಲಿ ಹೊರ ಬಿತ್ತು ಶಾಕಿಂಗ್ ನ್ಯೂಸ್..!

---Advertisement---

ಬೆಂಗಳೂರು: ಸದನದ ವೇಳೆ ಸಿಟಿ ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಆ ಮಾತಿನ ಚಕಮಕಿಯಲ್ಲಿ ಸಿಟಿ ರವಿ ವೇಶ್ಯೆ ಎಂಬ ಪದ ಬಳಕೆ ಮಾಡಿದ್ದರು. ಈ ಪದ ಬಳಕೆ ದೊಡ್ಡ ಮಟ್ಟಕ್ಕೆ ಪರಿಣಾಮ ಉಂಟು ಮಾಡಿತ್ತು. ಸಿಟಿ ರವಿ ಅವರನ್ನ ಪೊಲೀಸರು ಅರೆಸ್ಟ್ ಕೂಡ ಮಾಡಿದ್ದರು. ಪರ ವಿರೋಧಗಳು ಕೇಳಿ ಬಂತು. ಬಳಿಕ ಸಿಟಿ ರವಿ ಅವರು ನಾನು ಆ ಪದ ಬಳಕೆ ಮಾಡಿಲ್ಲ ಪ್ರಸ್ಟ್ರೇಟ್ ಅಂತ ಬಳಸಿದ್ದೀನಿ ಅಂದ್ರು. ಇದೀಗ ಅದರ ವರದಿ ಬಂದಿದ್ದು ಸಿಟಿ ರವಿ ಅವರು ಆ ಪದ ಬಳಕೆ ಮಾಡಿರುವುದು ಸತ್ಯ ಎನ್ನಲಾಗಿದೆ.

ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. ಸದನದ ವಿಡಿಯೋವನ್ನು ಸಿಐಡಿ ಪೊಲೀಸರು ಫೋರಿನ್ಸಿಕ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಆ ಸಂಬಂಧ ವರದಿ ಬಂದಿದ್ದು, ಸಿಟಿ ರವಿ ಅವಾಚ್ಯ ಶಬ್ದ ಬಳಕೆ ಮಾಡಿರುವುದು ಅದರಲ್ಲಿ ದೃಢವಾಗಿದೆ. ಅದರಲ್ಲೂ ನಾಲ್ಕು ಗಂಟೆಯ ವಿಡಿಯೋ ರೆಕಾರ್ಡ್ ನಲ್ಲಿ ಒಟ್ಟು ಏಳು ಬಾರಿ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ.

ಆದರೆ ರವಿ ಅವರು ನಾನು ಆ ಪದ ಬಳಕೆ ಮಾಡಿಲ್ಲ ಎಂದೇ ವಾದ ಮಾಡಿದ್ದಾರೆ. ಹೀಗಾಗಿ ಪೊಲೀಸರು ಸಿಟಿ ರವಿ ಅವರ ವಾಯ್ಸ್ ಸ್ಯಾಂಪಲ್ ಪಡೆಯಲು ಮುಂದಾಗಿದ್ದಾರೆ. ಆದರೆ ಅವರು ನೀಡಿಲ್ಲ. ಈ ಸಂಬಂಧ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆ ಇದ್ದು, ಅಲ್ಲಿಂದಾನೇ ವಿಚಾರಣೆಗೆ ಹಾಗೂ ವಾಯ್ಸ್ ಸ್ಯಾಂಪಲ್ ಗೆ ಪೊಲೀಸರು ಅನುಮತಿ ಪಡೆಯಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...